ತುಮಕೂರು | ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಕರ್ನಾಟಕ ಮಹಾಜನ ಪರಿವಾರ ಸಮಿತಿ ಒತ್ತಾಯ

Date:

Advertisements

ತುಮಕೂರು ಗ್ರಾಮಾಂತರ ಭಾಗದ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಿಕೊಡುವಂತೆ ಕೋರಿ ಸೋಮವಾರ ಕರ್ನಾಟಕ ಮಹಾಜನ ಪರಿವಾರ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ತುಮಕೂರು ತಾಲ್ಲೂಕು, ಕೋರಾ ಹೋಬಳಿ, ಮೆಳೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅತ್ಯಧಿಕವಾಗಿ ಪರಿಶಿಷ್ಠ ಜನಾಂಗಕ್ಕೆ ಸೇರಿದ ನಿವಾಸಿಗಳು ವಾಸವಾಗಿದ್ದು, ಬಹುತೇಕ ಎಲ್ಲರೂ ಕಡು ಬಡವರಾಗಿದ್ದು ಕೂಲಿ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ, ಪ್ರಸ್ತುತ ದಿನನಿತ್ಯ ಬಳಕೆ ವಸ್ತುಗಳು ಸೇರಿದಂತೆ ಬಹುತೇಕ ದುಬಾರಿ ಜೀವನದ ಪರಿಸ್ಥಿತಿಯಲ್ಲಿ ಜೀವನ ನಡೆಸುವುದೇ ಬಹಳ ಕಷ್ಠವಾಗಿದ್ದು, ಹೆಂಡತಿ ಮಕ್ಕಳನ್ನು ಸಾಕುವುದೋ ಅಥವಾ ಬಾಡಿಗೆ ಕಟ್ಟುವುದೋ ಎಂಬ ಯೋಚನೆಯಲ್ಲಿ ಬದುಕುತ್ತಿದ್ದಾರೆ, ಇಂತಹವರುಗಳನ್ನು ಸರ್ಕಾರ ಗುರ್ತಿಸಿ ಅವರಿಗೆ ನೆಲೆ ಮಾಡಿಕೊಡಬೇಕಾಗಿದೆ ಎಂದು ಕರ್ನಾಟಕ ಮಹಾಜನ ಪರಿವಾರ ಸಮಿತಿ ಜಿಲ್ಲಾ ಅಧ್ಯಕ್ಷ ಲವ ಎಂ.ಎ ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ ಈ ಭಾಗದ ಪರಿಶಿಷ್ಟ ಜನಾಂಗದವರು ವಾಸ ಮಾಡಲು ಅನುಕೂಲವಾಗುವಂತೆ ಮೆಳೇಹಳ್ಳಿ ಗ್ರಾಮದ ಸರ್ವೇ ನಂ. 61, & 64ರಲ್ಲಿ ಸರ್ಕಾರಿ ಜಮೀನು ಈ ಜಾಗದಲ್ಲಿ ದಲಿತರು ಮನೆ ಕಟ್ಟಿಕೊಂಡು ವಾಸ ಮಾಡಲು ಅನುಕೂಲವಾಗುವಂತೆ ಸರ್ಕಾರದ ಗಮನಸೆಳೆದು ಜಿಲ್ಲಾಡಳಿತದಿಂದ ಇಲ್ಲಿನ ಸರಿ ಸುಮಾರು 40 ರಿಂದ 50 ಕುಟುಂಬಗಳಿಗೆ ಅನುಕೂಲ ಮಾಡಿಕೊಡಬೇಕೆಂದು ನಮ್ಮ ಮನವಿಯಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿದ್ದೇವೆ, ಅವರು ಸಹ ನಮಗೆ ಪೂರಕವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ ಎಂದರು.

Advertisements

ಮನವಿ ಪತ್ರವನ್ನು ನೀಡುವ ಸಂದರ್ಭದಲ್ಲಿ ಕರ್ನಾಟಕ ಮಹಾಜನ ಪರಿವಾರ ಸಮಿತಿ ರಾಜ್ಯಾಧ್ಯಕ್ಷ ಹಂಚಿಹಳ್ಳಿ ರಾಮುಸ್ವಾಮಿ, ಕಾರ್ಯದರ್ಶಿ ರಾಜಶೇಖರ್, ಮಹಿಳಾ ಅಧ್ಯಕ್ಷೆ ಕೆ.ಸುಮಾ, ಮಂಜುಳ, ಸಿದ್ಧಮ್ಮ, ಲಕ್ಷ್ಮೀ ಎಂ.ಎನ್, ಜಯಮ್ಮ, ಲೀಲಾವತಿ, ಮಂಜಮ್ಮ, ಉಮಾ, ಶಿವಗಂಗಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X