ಬಿಡುಗಡೆ ದಿನ | ₹38 ಕೋಟಿ ಬಾಚಿದ ಪೊನ್ನಿಯನ್ ಸೆಲ್ವನ್-2

Date:

Advertisements
  • ತಮಿಳುನಾಡಿನಲ್ಲಿ 25 ಕೋಟಿ ರೂಪಾಯಿ ಗಳಿಕೆ
  • ನೆಗೆಟಿವ್ ರೋಲ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ ಬಚ್ಚನ್‌

ಮಣಿರತ್ನಂ ನಿರ್ದೇಶನದ ‘ಪೊನ್ನಿಯನ್ ಸೆಲ್ವನ್-2’ ಚಿತ್ರ ಶುಕ್ರವಾರ ಭರ್ಜರಿಯಾಗಿ ತೆರೆಕಂಡಿದ್ದು, ಮೊದಲ ದಿನವೇ ಬಾಕ್ಸ್ ಆಫೀಸ್​ನಲ್ಲಿ ₹38 ಕೋಟಿ ಗಳಿಕೆ ಮಾಡಿದೆ.

2022ರಲ್ಲಿ ಪೊನ್ನಿಯನ್ ಸೆಲ್ವನ್ ಭಾಗ 1 ಬಿಡುಗಡೆಯಾಗಿತ್ತು. ಎರಡನೇ ಸುರುಳಿಗಾಗಿ ಸಿನಿಮಾ ಪ್ರಿಯರು ಕಾತುರತೆಯಿಂದ ಕಾಯುತ್ತಿದ್ದರು. ಕಡೆಗೂ ಏಪ್ರಿಲ್ 28ರಂದು ಚಿತ್ರ ಬಿಡುಗಡೆಯಾಗಿದ್ದು, ದೇಶದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

‘ಪೊನ್ನಿಯಿನ್ ಸೆಲ್ವನ್-2’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ₹38 ಕೋಟಿ ಗಳಿಕೆ ಮಾಡಿದೆ. ತಮಿಳುನಾಡಿನಲ್ಲೇ ಚಿತ್ರ ₹25 ಕೋಟಿ ಗಳಿಕೆ ಮಾಡಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ₹3-4 ಕೋಟಿ, ಕರ್ನಾಟಕದಲ್ಲಿ ₹4-5 ಕೋಟಿ ಬಾಚಿಕೊಂಡಿದೆ.

Advertisements

ಇತ್ತೀಚೆಗೆ ರಿಲೀಸ್ ಆದ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾದ ಮೊದಲ ದಿನದ ಗಳಿಕೆಯನ್ನೂ ಪೊನ್ನಿಯನ್ ಸೆಲ್ವನ್-2 ಸಿನಿಮಾ ಹಿಂದಿಕ್ಕಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ?: ಕಟ್ಟುಪಾಡು ದಾಟಿ ಹೃದಯ ಸ್ಪರ್ಶಿಸುವ ಬ್ರಹ್ಮಚರ್ಯದ ಗೋಳಿನ ಕತೆ ‘ರಾಘವೇಂದ್ರ ಸ್ಟೋರ್ಸ್‌’

ಚಿಯಾನ್ ವಿಕ್ರಂ, ತ್ರಿಷಾ, ಆದಿತ್ಯ ಕರಿಕಾಳನ್, ನಂದಿನಿ, ಎಆರ್ ರೆಹಮಾನ್ ಸಂಗೀತ ನಿರ್ದೇಶನ ಅತ್ಯುತ್ತಮವಾಗಿದೆ ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾಗೆ ಕಮ್ ಬ್ಯಾಕ್ ಆಗಿರುವ ಐಶ್ವರ್ಯಾ ರೈ ಬಚ್ಚನ್‌ ಈ ಚಿತ್ರದಲ್ಲಿ ನೆಗೆಟಿವ್ ರೋಲ್ ಮಾಡಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ.

‘ಪೊನ್ನಿಯನ್ ಸೆಲ್ವನ್ 2’ ಸಿನಿಮಾ ತೆಲುಗು, ಮಲಯಾಳಂ, ಕನ್ನಡ, ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಿದೆ. ಮೊದಲ ಭಾಗದಂತೆ ಎರಡನೇ ಭಾಗಕ್ಕೂ ‘ವಿಶೇಷ ಪ್ರದರ್ಶನ’ಗಳನ್ನು ಏರ್ಪಡಿಸಲಾಗಿತ್ತು. ಅಭಿಮಾನಿಗಳು, ವಿಮರ್ಶಕರಿಂದ ಸಿನಿಮಾ ಪಾಸಿಟಿವ್‌ ಪ್ರತಿಕ್ರಿಯೆ ಪಡೆಯುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ತೀರ್ಮಾನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ...

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

Download Eedina App Android / iOS

X