ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ಬಿಜೆಪಿಯವರು ವರ್ತಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್‌

Date:

Advertisements

ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ ಅವರ ಪ್ರತಿಮೆಗೆ ಮಂಗಳವಾರ ಪುಷ್ಪನಮನ ಸಲ್ಲಿಸಿದ ನಂತರ, ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಲೋಕಾಯುಕ್ತದ ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.

“ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ” ಎಂದರು.

Advertisements

ಬಿಬಿಎಂಪಿಯಿಂದ ಪ್ರತಿ ವರ್ಷ ರಾಜೀವ್ ಗಾಂಧಿ ಜನ್ಮ ದಿನಾಚರಣೆ

“ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಪೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು” ಎಂದರು.

“ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್ ವರೆಗೆ ನಾಯಕರು ರಾಜೀವ್ ಗಾಂಧಿ ಅವರನ್ನು ಮರೆಯುವಂತಿಲ್ಲ. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ರಾಜೀವ್ ಗಾಂಧಿಯವರ ನೂತನ ಪ್ರತಿಮೆ ನಿರ್ಮಾಣಕ್ಕೆ ಸಹಿ ಹಾಕಿದೆ. ದಿನೇಶ್ ಗುಂಡೂರಾವ್ ಅವರ ಇಚ್ಛೆಯಂತೆ, ಅವರ ಕ್ಷೇತ್ರ ವ್ಯಾಪ್ತಿಯ ಶೇಷಾದ್ರಿಪುರಂ ಸಿಗ್ನಲ್ ಮುಕ್ತ ಜಂಕ್ಷನ್ ಗೆ ರಾಜೀವ್ ಗಾಂಧಿ ಹೆಸರಿಟ್ಟು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗಿತ್ತು” ಎಂದರು.

“18 ವರ್ಷಕ್ಕೆ ಮತದಾನದ ಹಕ್ಕು, ಪಂಚಾಯತ್ ರಾಜ್ ತಿದ್ದುಪಡಿ, ಐಟಿ ಬಿಟಿ ಬೆಳವಣಿಗೆಗೂ ಇವರೇ ಕಾರಣ. ಇಂದು ಎಲ್ಲರ ಬಳಿ ಎರಡೆರಡು ಮೊಬೈಲ್ ಗಳಿವೆ. ಇದಕ್ಕೆ ಕಾರಣ ರಾಜೀವ್ ಗಾಂಧಿಯವರ ದೂರದೃಷ್ಟಿಯ ಟೆಲಿಫೋನ್ ಕ್ರಾಂತಿ ಕಾರಣ” ಎಂದು ಹೇಳಿದರು.

“ದೇಶದ ಸಮಗ್ರತೆ ಐಕ್ಯತೆ ಶಾಂತಿಗಾಗಿ ನೆಹರು ಕುಟುಂಬ ದುಡಿದಿದೆ. ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ವಿಚಾರಗಳನ್ನು ನಾವು ಮರೆಯಬಾರದು ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X