ಕೇಂದ್ರ ಸರ್ಕಾರ ಯೂಟರ್ನ್: ಲ್ಯಾಟರಲ್‌ ಎಂಟ್ರಿ ನೇಮಕಾತಿಯ ಜಾಹೀರಾತು ಹಿಂಪಡೆಯಲು ಸೂಚನೆ

Date:

Advertisements

ಕೇಂದ್ರ ಸರ್ಕಾರದ 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪ ಕಾರ್ಯದರ್ಶಿಗಳ ಹುದ್ದೆಗಳ ಲ್ಯಾಟರಲ್‌ ಎಂಟ್ರಿ ನೇಮಕಾತಿ ಜಾಹೀರಾತು ಹಿಂಪಡೆಯುವಂತೆ ಕೇಂದ್ರ ಸರ್ಕಾರ ಇಂದು (ಆಗಸ್ಟ್ 20) ಕೇಂದ್ರೀಯ ಲೋಕಸೇವಾ ಆಯೋಗಕ್ಕೆ (ಯುಪಿಎಸ್‌ಸಿ) ನಿರ್ದೇಶಿಸಿದೆ.

ಸರ್ಕಾರಿ ಸೇವೆಗೆ ನೇಮಕಾತಿ ಮಾಡುವಾಗ ಮೀಸಲಾತಿಯನ್ನು ಕಡ್ಡಾಯವಾಗಿ ಅನ್ವಯಿಸಲೇಬೇಕು. ಹಾಗೆ ಮಾಡದ ನೇಮಕಾತಿಗಳು ಸ್ವೀಕಾರಾರ್ಹವಲ್ಲ ಎಂದು ಪ್ರತಿಪಕ್ಷಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು. ಎನ್‌ಡಿಎ ಮಿತ್ರ ಪಕ್ಷ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಇದಾದ ಬೆನ್ನಲ್ಲೇ ಕೇಂದ್ರ ಈ ಸೂಚನೆ ನೀಡಿದೆ.

ಸರ್ಕಾರದ ಈ ಕ್ರಮದಿಂದ ಎಸ್​ಸಿ, ಎಸ್​ಟಿ ಸೇರಿದಂತೆ ಹಿಂದುಳಿದ ಸಮುದಾಯಗಳ ಮೀಸಲಾತಿ ಹಕ್ಕನ್ನು ಕಸಿದುಕೊಂಡಂತಾಗುತ್ತದೆ ಎಂದು ಪ್ರತಿಪಕ್ಷಗಳು ಹೇಳಿದ್ದವು. ಪ್ರಮುಖ ಹುದ್ದೆಗಳಿಗೆ ಆರ್‌ಎಸ್‌ಎಸ್‌ ಸಂಬಂಧಿತ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳಲು ಹಿಂಬಾಗಿಲಿನಿಂದ(ಲ್ಯಾಟರಲ್ ಎಂಟ್ರಿ) ಈ ಪ್ರಯತ್ನ ಮಾಡಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದೆ.

Advertisements

ಇದನ್ನು ಓದಿದ್ದೀರಾ? ಯುಪಿಎಸ್‌ಸಿ ಅಧ್ಯಕ್ಷೆಯಾಗಿ ಮಾಜಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ನೇಮಕ

ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದ ಮೇರೆಗೆ ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸಚಿವ ಜಿತೇಂದ್ರ ಸಿಂಗ್ ಅವರು, ಯುಪಿಎಸ್​ಸಿ ಅಧ್ಯಕ್ಷೆ ಪ್ರೀತಿ ಸೂದನ್​ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

‘ಲ್ಯಾಟರಲ್ ಎಂಟ್ರಿ’ ಮೂಲಕ ಕೇಂದ್ರ ಲೋಕಸೇವಾ ಆಯೋಗಕ್ಕೆ(ಯುಪಿಎಸ್‌ಸಿ) ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳೂ ಸೇರಿದಂತೆ 45 ಮಂದಿಯ ನೇಮಕಾತಿ ಕುರಿತಂತೆ ಶನಿವಾರ ಯುಪಿಎಸ್‌ಸಿ ನೋಟಿಫಿಕೇಶನ್ ಹೊರಡಿಸಿತ್ತು. ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್‌ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಯುಪಿಎಸ್‌ಸಿ ತಿಳಿಸಿತ್ತು.

ಆದರೆ ಯುಪಿಎಸ್​ಸಿಯ ಈ ನಿರ್ಧಾರ ಮೀಸಲಾತಿಗೆ ಧಕ್ಕೆ ತರುತ್ತದೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

“ಈ ಕೂಡಲೇ ಜಾಹೀರಾತನ್ನು ರದ್ದು ಮಾಡಿ, ಹಿಂದುಳಿದ ಸಮುದಾಯಗಳ ಜನರು ಸರ್ಕಾರಿ ಹುದ್ದೆಗಳಲ್ಲಿ ನ್ಯಾಯಸಮ್ಮತವಾಗಿ ತಮ್ಮ ಪ್ರಾತಿನಿಧ್ಯ ಪಡೆಯಲು ಅವಕಾಶ ಮಾಡಿಕೊಡಿ” ಎಂದು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲ್ಯಾಟರಲ್‌ ಎಂಟ್ರಿ
ಲ್ಯಾಟರಲ್‌ ಎಂಟ್ರಿ
?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X