ಬೆಳಗಾವಿ | ಶರಣರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗದಿರಲಿ: ಅಪರ ಜಿಲ್ಲಾಧಿಕಾರಿ ವಿಜಯಕುಮಾರ್

Date:

Advertisements

ಬೆಳಗಾವಿಯ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ನೂಲಿ ಚಂದಯ್ಯನವರ ಜಯಂತಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, “ಶರಣರು ಮತ್ತು ಮಹಾನಾಯಕರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗಬಾರದು” ಎಂದು ಅಭಿಪ್ರಾಯಿಸಿದರು.

“ಪ್ರಸ್ತುತ ದಿನಗಳಲ್ಲಿ ಯುವಜನರು ಗುಣಾತ್ಮಕ ಶಿಕ್ಷಣ ಪಡೆಯಬೇಕು. ಜತೆಗೆ, ಸಮಾಜದಲ್ಲಿ ಸಾಮರಸ್ಯದಿಂದ ಬಾಳಬೇಕು. ಶರಣರು, ಮಹಾನ್‌ ನಾಯಕರ ಜಯಂತಿಗಳು ಒಂದೇ ವರ್ಗಕ್ಕೆ ಸೀಮಿತವಾಗಬಾರದು. ಬದಲಿಗೆ, ಇಡೀ ಸಮಾಜಕ್ಕೆ ಮಾದರಿಯಾಗುವಂತೆ ಅವುಗಳನ್ನು ಆಚರಿಸಬೇಕು” ಎಂದರು.

Advertisements

ಸಂಪನ್ಮೂಲ ವ್ಯಕ್ತಿ ಪ್ರೊ.ವೈ.ಎಂ.ಭಜಂತ್ರಿ ಮಾತನಾಡಿ, ” 12ನೇ ಶತಮಾನದಲ್ಲಿ ಬಸವೇಶ್ವರರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ನುಲಿ ಚಂದಯ್ಯನವರು ಶ್ರೇಷ್ಠ ವಚನಕಾರರಾಗಿದ್ದರು. ತಮ್ಮ ವಚನಗಳಲ್ಲಿ ಕಾಯಕ ಮತ್ತು ದಾಸೋಹಕ್ಕೆ ಅವರು ಒತ್ತು ಕೊಟ್ಟಿದ್ದರು. ಹಗ್ಗ ಮಾರುವ ಕಾಯಕವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿ ಬಸವಣ್ಣನವರ ಮೆಚ್ಚುಗೆಗೆ ಪಾತ್ರವಾಗಿದ್ದರು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಸಿಎಂ ಸಿದ್ಧರಾಮಯ್ಯ ರಾಜೀನಾಮೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು: ಎಸ್ ಆರ್ ಹಿರೇಮಠ್

ರಾಚಿ ಭಜಂತ್ರಿ, ಮಲ್ಲಪ್ಪ ಭಜಂತ್ರಿ, ಶಂಕರ ಭಜಂತ್ರಿ, ಮುತ್ತಪ್ಪ ಭಜಂತ್ರಿ, ರಾಜು ಭಜಂತ್ರಿ, ರಾಮಜಿ ಭಜಂತ್ರಿ, ಬಸವರಾಜ ಭಜಂತ್ರಿ, ಅಶೋಕ ಸುಳೇಭಾವಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ, ಅಶೋಕ ವೃತ್ತದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ಜಾನಪದ ಕಲಾತಂಡಗಳ ಮೆರವಣಿಗೆ ನಡೆಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X