ದಾವಣಗೆರೆ | ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು: ಪ್ರೊ.ಎ.ಬಿ.ರಾಮಚಂದ್ರಪ್ಪ

Date:

Advertisements

ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು. ಇಲ್ಲವಾದರೆ ಚಳುವಳಿಕಾರರಲ್ಲಿ ಸನಾತನಿ ಗುಣಧರ್ಮ ಮೊಳಕೆಯೊಡೆದು ಚಳುವಳಿ ದುರ್ಬಲವಾಗುವ ಅಪಾಯವಿದೆ. ಪ್ರತಿಯೊಬ್ಬ ಕಾರ್ಮಿಕನಲ್ಲಿ ಪ್ರಯೋಗಶೀಲತೆಯನ್ನು ಬಿತ್ತಲು ಇಂತಹ ಅಧ್ಯಯನ ಶಿಬಿರಗಳು ಬಹುಮುಖ್ಯವಾಗುತ್ತದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಅವರು ದಾವಣಗೆರೆ ಜಿಲ್ಲೆ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಭವನದಲ್ಲಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿದ್ದ ಮೂರು ದಿನಗಳ ರಾಜ್ಯ ಮಟ್ಟದ ನಾಯಕತ್ವ ವಿಕಸನ ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಅಪಾಯಕಾರಿಯಾಗಿ ಬೆಳೆಯುತ್ತಿರುವ ಧರ್ಮಾಂಧ, ಕೋಮುವಾದಿ ಶಕ್ತಿಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ನಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಲು ಈ ರೀತಿಯ ಅಧ್ಯಯನ ಶಿಬಿರಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು ಹಾಗೂ ಕಾರ್ಮಿಕರು ಇದರಲ್ಲಿ ಪಾಲ್ಗೊಳ್ಳಬೇಕು. ಕಾರ್ಮಿಕರ ಸಂಕೇತ ಕೆಂಪು ಬಣ್ಣವೇ ಹೊರತು ಕೇಸರಿ ಅಲ್ಲ‌. ಕೆಂಪು ಬಣ್ಣ ಕ್ರಾಂತಿ, ಶಾಂತಿ, ಉತ್ಕೃಷ್ಟತೆಯ ಸಂಕೇತವಾದರೆ ಕೇಸರಿ ಬಣ್ಣ ಗುಲಾಮಗಿರಿಯ ಸಂಕೇತವಾಗಿದೆ. ಇದನ್ನು ಕಾರ್ಮಿಕರು ಅರ್ಥೈಸಿಕೊಂಡು ಉತ್ಕೃಷ್ಟ ಚಿಂತನೆಗಳ ಮೂಲಕ ಚಳುವಳಿಯನ್ನು ವೈಚಾರಿಕ ನೆಲೆಗಟ್ಟಿನಲ್ಲಿ ಮುನ್ನಡೆಸುವಂತೆ ಕರೆ ನೀಡಿದರು.

Advertisements
WhatsApp Image 2024 08 18 at 6.48.08 PM

ಎಐಟಿಯುಸಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್ ಮಾತನಾಡಿ, ಮಾನವ ಬಂಧುತ್ವ ವೇದಿಕೆಯ ಸಹಕಾರದೊಂದಿಗೆ ಮೂರು ದಿನಗಳ ನಾಯಕತ್ವ ವಿಕಸನ ಅಧ್ಯಯನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಕಾರ್ಮಿಕರು ಸಂಘಟನೆ ಮತ್ತು ಚಳುವಳಿಯಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ವಿಷಯಗಳ ಮೇಲೆ ಪ್ರೊ.ಎ.ಬಿ.ರಾಮಚಂದ್ರಪ್ಪ, ಡಾ.ಸಿದ್ದನಗೌಡ ಪಾಟೀಲ್, ಸತ್ಯಾನಂದ, ಅಮ್ಜದ್ ಮುಂತಾದ ವಿಷಯ ಪರಿಣಿತರು ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ. ಶಿಬಿರದ ಉಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಎಐಟಿಯುಸಿ ದಾವಣಗೆರೆ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ವಹಿಸಿದ್ದರು. ವೇದಿಕೆಯಲ್ಲಿ ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್, ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಹೆಚ್.ಜಿ.ಉಮೇಶ್ ಅವರಗೆರೆ, ಕಾರ್ಯದರ್ಶಿ ಅವರಗೆರೆ ಚಂದ್ರು, ಅಂಗನವಾಡಿ ಫೆಡರೇಶನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ಬಿಸಿಯೂಟ ಫೆಡರೇಶನ್ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ್, ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟದ ದಿವ್ಯಾ ಬಿರಾದಾರ, ಎಐಟಿಯುಸಿ ಗದಗ ಜಿಲ್ಲಾಧ್ಯಕ್ಷ ಎಂ.ಐ.ನವಲೂರು, ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಅವರಗೆರೆ ವಾಸು, ಅಂಗನವಾಡಿ ಫೆಡರೇಶನ್‌ನ ಎಂ.ಬಿ.ಶಾರದಮ್ಮ, ಸಿಪಿಐ ಚನ್ನಗಿರಿ ತಾಲೂಕು ಅಧ್ಯಕ್ಷ ಮೊಹಮ್ಮದ್ ರಫೀಕ್, ದಾದಾಪೀರ್ ಮತ್ತು ಇತರ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X