ಕೊಡಗು | ‌ಅಕ್ರಮ ಸಕ್ರಮ ಅರ್ಜಿ ಕೂಡಲೇ ವಿಲೇವಾರಿ ಮಾಡಿ: ಕಾಮ್ರೇಡ್ ನಿರ್ವಾಣಪ್ಪ

Date:

Advertisements

ಕೊಡಗು ಜಿಲ್ಲೆಯ ಕುಶಾಲ್ ನಗರ ತಾಲೂಕಿನಾದ್ಯಂತ ಅಕ್ರಮ ಸಕ್ರಮ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಎಂದು ಕಾಮ್ರೇಡ್ ನಿರ್ವಾಣಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಕುಶಾಲನಗರ ತಾಲೂಕು ಕಚೇರಿ ಎದುರು ಎಐಕೆಕೆಎಸ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿ, “ಅಕ್ರಮ ಸಕ್ರಮ ಯೋಜನೆಯ ಅರ್ಜಿಗಳು ವಿಲೇವಾರಿಯಾಗದೆ ಕಡತದಲ್ಲೇ ಧೂಳು ಹಿಡಿಯುತ್ತಿವೆ. ದಲಿತರ ಭೂಮಿ ಕಬಳಿಕೆ, ರಸ್ತೆ ಸಮಸ್ಯೆಗಳು ಇಂದಿಗೂ ಪರಿಹಾರ ಕಂಡಿಲ್ಲ” ಎಂದು ಆರೋಪಿಸಿದರು.

“ಕುಶಾಲನಗರ ಹೊಸ ತಾಲೂಕು ಆಗಿದ್ದು ಹಿಂದೆ ಸೋಮವಾರಪೇಟೆಗೆ ಸೇರಿತ್ತು. ಆದರೆ ದಲಿತರ, ಬಡವರ ಅಕ್ರಮ ಸಕ್ರಮ ಸಾಗುವಳಿ 57 ಹಾಗೂ 94ಸಿ ಅರ್ಜಿಗಳು ವಿಲೇವಾರಿಯಾಗದೆ ಕಡತಗಳು ಧೂಳು ಹಿಡಿಯುತ್ತಿವೆ. ತಾಲೂಕು ಬದಲಾದರೂ ಬಡವರ ಕಷ್ಟ ತೀರಲಿಲ್ಲ. ಹೋರಾಟಗಳು ನಡೆಯುತ್ತಲಿವೆ, ನಡೆಯುತ್ತಲೇ ಇರುತ್ತವೆ. ಅಧಿಕಾರಿಗಳು ಬರುತ್ತಾರೆ, ಮನವಿ ಪಡೆಯುತ್ತಾರೆ, ನಿಮ್ಮ ಕೆಲಸ ಮಾಡುತ್ತೇವೆಂದು ಹೇಳುತ್ತಾರೆ, ಅಲ್ಲಿಗೆ ಮುಗಿಯಿತು. ಇನ್ನ ಹೇಳೋರು! ಕೇಳೋರು ಏನಾಯಿತು ಅನ್ನುವುದು ಯಾರಿಗೂ ತಿಳಿಯಲ್ಲ ಕೆಲಸಗಳು ಅಲ್ಲಿಗೇ ನಿಲ್ಲುತ್ತವೆ” ಎಂದು ಖೇದ ವ್ಯಕ್ತಪಡಿಸಿದರು.

Advertisements
ಅಕ್ರಮ ಸಕ್ರಮ ಅರ್ಜಿ

“ದಲಿತರ ಭೂಮಿ ಕಬಳಿಕೆಯಾಗಿದೆ. ಸತ್ತರೆ ಹೂಳಲೂ ಜಾಗವಿಲ್ಲ, ಓಡಾಡಲು ರಸ್ತೆ ಇಲ್ಲ. ಮತ್ತೆ ನಾವು ಬದುಕುವುದಾದರೂ ಹೇಗೆ?. ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಮನಸ್ಸು ಮಾಡಿ ಬಡವರ, ಶೋಷಿತರ, ದಲಿತರ ಪರವಾಗಿ ಕಾನೂನು ರೀತ್ಯಾ ಕೆಲಸ ಮಾಡಬೇಕು” ಎಂದು ಮನವಿ ಮಾಡಿದರು.

“ತಾಲೂಕಿನಲ್ಲಿ ಬಾಕಿ ಇರುವ ದಲಿತರ ಬಡವರ ಅಕ್ರಮ ಸಕ್ರಮ ಫಾರಂ ನಂ. 57 94ಸಿ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ಬಡವರ ತುಂಡು ಭೂಮಿಯನ್ನು ಪೈಸಾರಿ ಎಂದು ಆರ್‌ಟಿಸಿಗೆ ಸೇರಿಸಿರುವುದನ್ನು ರದ್ದುಗೊಳಿಸಬೇಕು. ಹೊಸಕೋಟೆಯಲ್ಲಿ 15 ಕುಟುಂಬಳು ವಾಸವಿರುವ ದಲಿತರಿಗೆ ರಸ್ತೆ ಬಿಡಿಸಿಕೊಡಬೇಕು. ಭುವನಗಿರಿ ಮತ್ತು ಸೀಗೆ ಹೊಸೂರು ಸರ್ವೆ ನಂ 35 ಮತ್ತು 2/10ರ ದಲಿತರ ಭೂಮಿಯ ಮೇಲೆ ಉಳ್ಳವರಿಗೆ ರಸ್ತೆ ಬಿಡಿಸಿಕೊಡುವುದನ್ನು ಕೈ ಬಿಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀಳಗಿ | ಸಿದ್ದರಾಮಯ್ಯ ಕಳಂಕಿತ ವ್ಯಕ್ತಿ ಆಗಲು ಸಾಧ್ಯವಿಲ್ಲ: ಕಾಂಗ್ರೆಸ್ ಮುಖಂಡ ಎಸ್ ಟಿ ಪಾಟೀಲ್

“ದೊಡ್ಡತ್ತೂರು ಗ್ರಾಮದ ದಲಿತ ಸಿದ್ದಯ್ಯನ ಸರ್ವೆ ನಂ. 30/5ರ ಎರಡು ಎಕರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸವರ್ಣೀಯರಿಂದ ತಕ್ಷಣ ಬಿಡಿಸಿಕೊಡಬೇಕು. ಸರ್ಕಾರಿ ಭೂಮಿಯನ್ನು ಉಳ್ಳವರು ಅಕ್ರಮಿಸಿಕೊಂಡಿರುವುದನ್ನು ತೆರವುಗೊಳಿಸಿ ಬಡವರಿಗೆ ಹಂಚಿಕೆ ಮಾಡಬೇಕು. ಇನ್ನು 15 ದಿನಗದೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಹೋರಾಟದಲ್ಲಿ ಮುತ್ತಣ್ಣ, ಜವರಯ್ಯ, ಎಚ್ ಜಿ ಪ್ರಕಾಶ್ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X