ತರೀಕೆರೆ | ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ : ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

Date:

Advertisements

ರೈತರನ್ನು ಒಕ್ಕಲೆಬ್ಬಿಸಿದರೆ ಬೃಹತ್ ಜನಾಂದೋಲನ ನಡೆಸಬೇಕಾದೀತು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ರೈತ ಹಿತರಕ್ಷಣಾ ಸಮಿತಿಯ ವತಿಯಿಂದ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಬುಧವಾರ ಭಾಗವಹಿಸಿದ ಅವರು ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ಘೋಷಿಸಿದರು.

ಅರಣ್ಯ ಇಲಾಖೆಯವರು ರೈತರನ್ನು ಒಕ್ಕಲೆಬ್ಬಿಸುತ್ತಿರುವ ಕ್ರಮವನ್ನು ಖಂಡಿಸಿ ಮಾತನಾಡಿದ ಚಂದ್ರು, “ರಾಮನಗರ ಜಿಲ್ಲೆಯಲ್ಲಿ ಈಗಾಗಲೇ ಅಲ್ಲಿನ ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಅನೇಕ ದಶಕಗಳಿಂದ ಅರಣ್ಯ ಇಲಾಖೆಯ ಜಮೀನುಗಳಲ್ಲಿ ಕೃಷಿ ಕಾರ್ಯವನ್ನು ಮಾಡುತ್ತಿರುವ ಸಣ್ಣ ಸಣ್ಣ ಹಿಡುವಳಿದಾರರಿಗೆ ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವುದಿಲ್ಲವೆಂದು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಈ ರೀತಿ ಆದೇಶವನ್ನು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಯಾಕೆ ಮಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

Advertisements
ತರೀಕೆರೆ1

“ಈ ಬಗ್ಗೆ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಬಳಿ ಮಾತನಾಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯೂ ಸಹ ಮಾತನಾಡಿ ತಮ್ಮ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ನಾನು ಮುಂದಾಗುತ್ತೇನೆ” ಎಂದು ಸೇರಿದ್ದ ಸಾವಿರಾರು ರೈತರಿಗೆ ಮುಖ್ಯಮಂತ್ರಿ ಚಂದ್ರು ಆಶ್ವಾಸನೆ ನೀಡಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಒಂದು ವರ್ಷದಲ್ಲಿ 90 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಡಾ.ನಾಗಲಕ್ಷ್ಮೀ ಚೌಧರಿ

ಪ್ರತಿಭಟನೆಯಲ್ಲಿ ಜಿಲ್ಲೆಯ ನಾನಾ ರೈತ ಸಂಘಟನೆಗಳು ಹಾಗೂ ಆಮ್ ಆದ್ಮಿಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿ ಚಂದ್ರು 3
ತರೀಕೆರೆ
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X