ಬೆಳಗಾವಿ | ಅರಣ್ಯ ಭೂಮಿ ಅತಿಕ್ರಮಣ ಆರೋಪ; ವಿಷದ ಬಾಟಲಿ ಹಿಡಿದು ರೈತ ಮಹಿಳೆಯರ ಪ್ರತಿಭಟನೆ

Date:

Advertisements

ಅರಣ್ಯ ಭೂಮಿ ಅತಿಕ್ರಮಣ ಮಾಡಿ ಸಾಗುವಳಿ ಮಾಡಿದ್ದಾರೆಂದು ರೈತರನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಡೆದ ಮಹಿಳೆಯರು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ ಗ್ರಾಮದಲ್ಲಿ ನಡೆದಿದೆ.

ಗೋವಿನ ಜೋಳ ಹಾಗೂ ಕಬ್ಬುಬೆಳೆ ನಾಶ ಮಾಡಿ ರಥರನ್ನು ಒಕ್ಕಲೆಬ್ಬಿಸಲು ಬಂದಿದ್ದ ಅಧಿಕಾರಿಗಳ ವಿರುದ್ಧ ದೇವಗಾಂವ ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, “1957ರಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತ ಬಂದಿದ್ದೇವೆ. ಇದೀಗ ಇದ್ದಕಿದ್ದಂತೆ ಜೆಸಿಬಿ ಯಂತ್ರದ ಮೂಲಕ ಬಂದ ಅರಣ್ಯ ಇಲಾಖೆ ಅಧಿಕಾರಿಗಳು, ಗೋವಿನಜೋಳ ಕಬ್ಬುಬೆಳೆಗಳನ್ನು ನಾಶ ಮಾಡಿ, ಕೈಗೆ ಬಂದಿದ್ದು ಬಾಯಿಗೆ ಬರದಂತೆ ಮಾಡಲು ಮುಂದಾಗಿದ್ದಾರೆ” ಎಂದು ರೈತ ಮಹಿಳೆಯರು ಆರೋಪಿಸಿದರು.

“ಪಹಣಿ ಪತ್ರಿಕೆಯ ಸಾಗುವಳಿದಾರರ ಹೆಸರಿನಲ್ಲಿ ಕೆಲವರ ಹೆಸರುಗಳಿವೆ. ನಂತರದ ದಿನಗಳಲ್ಲಿ ಈ ಭೂಮಿಯನ್ನು ಅರಣ್ಯ ಇಲಾಖೆ ವ್ಯಾಪ್ತಿಗೆ ಪಡೆಯಲಾಗಿದೆ. ಕೆಲವರಿಗೆ ಭೂಮಿ ಹಕ್ಕು ನೀಡಿ ನಮಗೇಕೆ ನೀಡುತ್ತಿಲ್ಲ. ಈ ಭೂಮಿಯಲ್ಲಿ ನಾವು ಇಷ್ಟು ವರ್ಷಗಳ ಕಾಲ ಬದುಕು ನಡೆಸಿದ್ದೇವೆ. ಸಾಲ ಮಾಡಿ ಬೆಳೆದ ಬೆಳೆಗಳನ್ನು ನಾಶಮಾಡಲು ಇದೀಗ ಅಧಿಕಾರಿಗಳು ಬಂದಿದ್ದಾರೆ. ಸಾಗುವಳಿ ಭೂಮಿಯಲ್ಲಿ ಟ್ರಂಚ್ ಹೊಡೆದು ಸಸಿ ನೆಡಲು ಬಂದಿದ್ದಾರೆ.‌ ನಮ್ಮ ಜಾಗ ಬಿಟ್ಟು ನಾವು ಕದಲುವದಿಲ್ಲ” ಎಂದು ರೈತ ಮಹಿಳೆಯರು ವಿಷದ ಬಾಟಲಿ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

Advertisements

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ ಪ್ರಕರಣ | ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮೈಸೂರು ವಕೀಲರ ಬೆಂಬಲ

ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘಟನೆಯ ಮುಖಂಡರಾದ ಎಂ ಎಫ್‌ ಜಕಾತಿ, ಅಪ್ಪೇಶ ದಳವಾಯಿ, ಬಿಷ್ಪಪ್ಪ ಶಿಂಧೆಯವರು ಘಟನಾ ಸ್ಥಳಕ್ಕೆ ಆಗಮಿಸಿ, ಟ್ರಂಚ್‌ ಹೊಡೆಯಲು ಅವಕಾಶ ಕೊಡುತ್ತೇವೆ. ಆದರೆ ಬೆಳೆ ನಾಶಮಾಡಬಾರದೆಂದು ಅಧಿಕಾರಿಗಳ ಜತೆಗೆ ಒಪ್ಪಂದ ಮಾಡಿಕೊಂಡ ಬಳಿಕ ರೈತರು ಟ್ರಂಚ್ ಹೊಡೆಯಲು ಅವಕಾಶ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X