ಐಸಿಸಿ ರ‍್ಯಾಂಕಿಂಗ್ ಪ್ರಕಟ; ಬೌಲಿಂಗ್ ವಿಭಾಗದಲ್ಲಿ ಭಾರತೀಯರಿಗೆ ಅಗ್ರ ಸ್ಥಾನ

Date:

Advertisements

ಐಸಿಸಿ ನೂತನ ಟೆಸ್ಟ್ ಕ್ರಿಕೆಟ್‌ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 870 ಅಂಕಗಳೊಂದಿಗೆ ನಂಬರ್ ಒನ್ ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಜೋಶ್ ಹೇಜಲ್‌ವುಡ್ 847 ರೇಟಿಂಗ್ ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದು, 847 ರೇಟಿಂಗ್ ಅಂಕ ಹೊಂದಿದ್ದಾರೆ. ಆಸೀಸ್‌ನ ಪ್ಯಾಟ್ ಕಮ್ಮಿನ್ಸ್ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡೊ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್​ಗಳ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ, 444 ರೇಟಿಂಗ್ ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 322 ರೇಟಿಂಗ್ ಅಂಕ ಹೊಂದಿದ್ದಾರೆ.

Advertisements

ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ದಿಗ್ಗಜ ಆಟಗಾರ ಜೋ ರೂಟ್ 872 ರೇಟಿಂಗ್ ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 859 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ: ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರ

ಪಾಕಿಸ್ತಾನದ ಬಾಬರ್ ಆಝಂ 768 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ 768 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 757 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ತಂಡಗಳ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ 124 ರೇಟಿಂಗ್ ಅಂಕಗಳೊಂದಿಗೆ ವಿಶ್ವದ ನಂಬರ್ ಒನ್ ತಂಡ ಎನಿಸಿಕೊಂಡಿದ್ದರೆ, ಭಾರತ ತಂಡ 120 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 108 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 104 ಅಂಕದೊಂದಿಗೆ ನಾಲ್ಕನೇ ಮತ್ತು ನ್ಯೂಜಿಲೆಂಡ್ 96 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X