ಕೋಲಾರ | ಅಂಗಾಂಗ ದಾನ ; ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Date:

Advertisements

ಮಗ ಅಕಾಲಿಕ ಮರಣ ಹೊಂದಿದ ಹಿನ್ನೆಲೆ ಕುಟುಂಬವೊಂದು ಅಂಗಾಂಗ ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಕೋಲಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳಾದ ಸಂಜೀವಪ್ಪ, ವಿಜಯ್‌ ಕುಮಾರಿ ದಂಪತಿ ಪುತ್ರ ಸಂಜಯ್(23)‌ ಬುಧವಾರ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ದುರಾದೃಷ್ಟವಶಾತ್ ಸಂಜಯ್‌ ಮಿದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ್ದರು.

ಮಗನ ಸಾವಿನ ಬಳಿಕ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ ಕುಟುಂಬ, ಅಂಗಾಂಗ ದಾನಕ್ಕೆ ಒಲ್ಲೆ ಎನ್ನುವ ಬಹುತೇಕರ ನಡುವೆ ಅಂಗಾಂಗ ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದೆ. ಅಂಗಾಂಗ ದಾನದಿಂದ ಮೃತ ಸಂಜಯ್‌ ಅವರನ್ನು ಇತರರಲ್ಲಿ ಕಾಣುವ ಯತ್ನಕ್ಕೆ ಕುಟುಂಬ ಮುಂದಾಗಿದ್ದು ಇದೀಗ ಮೆಚ್ಚುಗೆ ವ್ಯಕ್ತವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ನಿರ್ಮಾಣ ಹಂತದ ಗೋಡೆ ಕುಸಿತ; ದಂಪತಿಯ ಸ್ಥಿತಿ ಗಂಭೀರ

ಈ ಕುರಿತು ಶ್ಲಾಘನೆ ವ್ಯಕ್ತಪಡಿಸಿರುವ ಆಸ್ಪತ್ರೆ ವೈದ್ಯರು, ಅಂಗಾಂಗ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದರೆ ಅನೇಕ ಜೀವಗಳಿಗೆ ದಾರಿದೀಪವಾಗುತ್ತದೆ. ಅಂಗಾಂಗ ದಾನದ ವಿಚಾರದಲ್ಲಿ ಮೃತ ವ್ಯಕ್ತಿಯ ಸಾವಿನ ನಂತರದ ಪ್ರತಿಯೊಂದು ನಿಮಿಷವು ಅತೀ ಮುಖ್ಯವಾಗಿರುತ್ತದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X