ಕೊರಟಗೆರೆ|ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವ ಪರಮೇಶ್ವರ್ ಭೇಟಿ : ಪರಿಶೀಲನೆ

Date:

Advertisements

ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಆ.19ರಂದು ಸುರಿದ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕಳೆದ ಆಗಸ್ಟ್ 19ರಂದು ಮನೆಗಳಿಗೆ ಮಳೆ ನೀರು ನುಗ್ಗಿದ್ದ ಕೊರಟಗೆರೆ ಪಟ್ಟಣದ ಹೊಸ ಬಡಾವಣೆ ಪ್ರದೇಶ, ಮಳೆ ನೀರಿನಿಂದ ಹಾನಿಗೊಳಗಾದ ಪೈಪ್‌ಲೈನ್ ಕಾಮಗಾರಿ ವೀಕ್ಷಿಸಲು ಊರ್ಡಿಗೆರೆ ಕ್ರಾಸ್‌ಗೆ ಭೇಟಿ ನೀಡಿದರು.

ಚನ್ನಸಾಗರ ಗ್ರಾಮಕ್ಕೆ ಭೇಟಿ ನೀಡಿ ಜಯಮಂಗಲಿ ನದಿ ನೀರಿನ ಹರಿವನ್ನು ಪರಿಶೀಲಿಸಿದ ನಂತರ ತೂಬುಗಳಲ್ಲಿ ಕಟ್ಟಿಕೊಂಡಿರುವ ಕಸ-ಕಡ್ಡಿಗಳನ್ನು ಕೂಡಲೇ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ದಾರಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisements
WhatsApp Image 2024 08 22 at 9.03.53 AM

ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಾಗ ಚನ್ನಸಾಗರ ಗ್ರಾಮಕ್ಕೆ ನೀರು ನುಗ್ಗುವುದರಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದಾಗ ಸ್ಪಂದಿಸಿದ ಸಚಿವರು, ಗ್ರಾಮವನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರಿ ಜಮೀನನ್ನು ಗುರುತಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಯಿಂದ ಮನೆ ಹಾನಿಗೊಳಗಾದ ಸಂತ್ರಸ್ತರಾದ ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗ ಹೋಬಳಿ ಅಜ್ಜೀಹಳ್ಳಿ ಗ್ರಾಮದ ಶಂಕ್ರಮ್ಮ ಕೋಂ.ಲೇಟ್ ಸಾಕನರಸಯ್ಯ ಹಾಗೂ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮದ ಕೆಂಪಯ್ಯ ಬಿನ್ ದೊಡ್ಡ ಹನುಮಂತಯ್ಯ ಅವರಿಗೆ ತಲಾ 50 ಸಾವಿರ ರೂ.ಗಳ ಪರಿಹಾರವನ್ನು ಸಚಿವರು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸಾಧಕರಿಗೆ ಎಸ್ಐಒ ಗೌರವ

 “ಪರಿಶ್ರಮಿಸಿದವರಿಗೆ ಫಲವಿಲ್ಲವೆಂದೇ ಇಲ್ಲ” ಎಂಬ ನಂಬಿಕೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದಂತಾಯಿತು. ನಗರದ ದಾನಾ...

ಕೊರಟಗೆರೆ | ಅತ್ತೆಯ ಡೆತ್ ಸೆಂಟೆನ್ಸ್ ಬರೆದ ಡೆಂಟಲ್ ಡಾಕ್ಟರ್ ಈಗ ಪೊಲೀಸರ ಅತಿಥಿ

ಕೊರಟಗೆರೆ  ತಾಲೂಕಿನ  ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆ ತನಕ...

ತುಮಕೂರು | ಸಿಪಿಐ ಜನಪರ ಹೋರಾಟಕ್ಕೆ ಜನರ ಬೆಂಬಲ ಬೇಕು : ಡಾ. ಜಿ ರಾಮಕೃಷ್ಣ

 ದೇಶದಲ್ಲಿ ಕಾರ್ಮಿಕರು ದುಡಿಯುವ ಮತ್ತು ಬಡವರ ಪರವಾಗಿ ಬೀದಿಗಿಳಿದು ಸರ್ಕಾರ ಸ್ಥಳೀಯ...

Download Eedina App Android / iOS

X