ಬೆಳಗಾವಿ | ಶಾಸಕರ ಹೆಸರಿನಲ್ಲಿ ಪೊಲೀಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯ ಬಂಧನ

Date:

Advertisements

ಎಂಎಲ್ಎ, ಎಂಪಿಗಳ ಹೆಸರಿನಲ್ಲಿ ಪೊಲಿಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಕಂಟ್ರೋಲ್ ರೂಂ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ನಾನು ಗೋಕಾಕ್ ಎಂಎಲ್ಎ ನಾ ಹೇಳಿದ ಕೆಲಸ ಮಾಡದಿದ್ದರೆ, ನಿಮ್ಮನ್ನು ಎತ್ತಂಗಡಿ ಮಾಡುತ್ತೇನೆ. ನನಗೆ ಸಿಎಂ ಪರಿಚಯವಿದ್ದಾರೆ ಎಂದು ಪೊಲೀಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿ ಮೂಡಲಿಗಿ ತಾಲೂಕಿನ ಅರಭಾವಿ ಗ್ರಾಮದ ಸುನಿಲ್ ದಾಸರ ಎಂಬಾತನನ್ನು ಬಂಧಿಸಲಾಗಿದೆ. ಈತ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೊಲೀಸರಿಗೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

ಬೆಳಗಾವಿ

ಆರೋಪಿಯು 2019ರ ಲೋಕಾಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂಬ ವಿಚಾರ ತನಿಖೆಯ ವೇಳೆ ತಿಳಿದು ಬಂದಿದೆ.

Advertisements

ಹಣದ ವಿಚಾರವಾಗಿ ಆರೋಪಿಯ ತಾಯಿಯನ್ನು ಗೋಕಾಕ ಪೋಲಿಸರು ವಿಚಾರಣೆ ನಡೆಸಿದ್ದರು. ಈ ವಿಷಯವಾಗಿ ಸುನಿಲ ದಾಸರ, ನನ್ನ ತಾಯಿಗೆ ತೊಂದರೆ ಕೊಡ್ತಿದ್ದೀರಾ ಎಂದು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಐಜಿ ವಿಕಾಸ ಕುಮಾರಗೆ ಕರೆ ಮಾಡಿದ್ದಲ್ಲದೆ, ಎತ್ತಂಗಡಿ ಮಾಡುವೆ ಎಂದು ಬೆದರಿಕೆ ಹಾಕಿದ್ದನು. ಈ ಕುರಿತು ಗೋಕಾಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಆರೋಪಿಯನ್ನು ಪತ್ತೆ ಹಚ್ಚಿ ಬಂಧನ ಮಾಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X