ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ : ಬೆಳಗಾವಿ ಜಿಲ್ಲೆಯೊಂದರಲ್ಲೇ ₹1.89 ಕೋಟಿ ದಂಡ ವಸೂಲಿ!

Date:

Advertisements

ರಾಜ್ಯಾದ್ಯಂತ ರೇಷನ್‌ ಕಾರ್ಡ್‌ಗಳ ಪರಿಶೀಲನೆ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಿದೆ. ನಕಲಿ ದಾಖಲೆ ನೀಡಿ, ರೇಷನ್ ಕಾರ್ಡ್‌ ಪಡೆದವರಿಗೆ ದಂಡ ವಿಧಿಸಲಾಗುತ್ತಿದೆ. ಈ ನಡುವೆ ಬೆಳಗಾವಿ ಜಿಲ್ಲೆಯೊಂದರಲ್ಲೇ ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದಿದ್ದವರಿಂದ ಬರೋಬ್ಬರಿ ₹1.89 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.

ಬೆಳಗಾವಿಯಲ್ಲಿ ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಚೀಟಿಗಳನ್ನು ರದ್ದು ಮಾಡಲಾಗಿದ್ದು, ನಕಲಿ ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ಈವರೆಗೆ ಒಟ್ಟು ₹1.89 ಕೋಟಿ ರೂ. ದಂಡ ಕೂಡ ವಸೂಲಿ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ”ಜಿಲ್ಲೆಯಲ್ಲಿ 557 ಅಂತ್ಯೋದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು 6 ತಿಂಗಳಿಂದ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲಪಡಿತರ ಚೀಟಿಗಳನ್ನು 2024ರ ಜುಲೈ 29ರಂದು ರದ್ದುಪಡಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

Advertisements
ಜಿಲ್ಲಾಧಿಕಾರಿ ರೋಷನ್
ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌

‘ಅಲ್ಲದೇ, ಸರಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು 45,804 ಆದ್ಯತಾ ಪಡಿತರ ಚೀಟಿಗಳನ್ನು ‘ಆದ್ಯತೇತರ’ ಎಂದು ಪರಿವರ್ತಿಸಲಾಗಿದೆ. ಇಷ್ಟು ದಿನ ಆದ್ಯತಾ ಪಡಿತರ ಚೀಟಿ ಲಾಭ ಪಡೆದ ಕಾರಣ ಆ ಎಲ್ಲ ಪಡಿತರ ಚೀಟಿದಾರರಿಂದ ಒಟ್ಟು 1,88,75,946 ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

11,117 ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರು, 1,421 ಆದ್ಯತೇತರ ಪಡಿತರ ಚೀಟಿದಾರರು ಸೇರಿ ಒಟ್ಟು 12,538 ಫಲಾನುಭವಿಗಳು ಮೃತಪಟ್ಟಿದ್ದು, ಅವರ ವಿವರವನ್ನು ಕುಟುಂಬ ದತ್ತಾಂಶದಿಂದ ತೆಗೆಯಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ತುಂಬಾ ಕಠಿಣಾತೀತವಾಗಿ ವರ್ತಿಸಬೇಕು ಸರ್ಕಾರ, ಮುಂಬರುವ ಯೊಜನೇಗಳ ಬಗ್ಗೆ ಆಲೊಚನೆಮಾಡುವ ಮುನ್ನುಡಿಯಾಗಬೇಕು, ಕೈಗೊಂಡ ಕ್ರಮ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X