ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರು

Date:

Advertisements

ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಅವರ ಪುತ್ರ ಬಸವರಾಜ್ ಹತ್ಯೆಗೆ ಸಂಚು ನಡೆಸಿದ್ದು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರಾಗಿದ್ದಾರೆ.‌

ಆರೋಪಿಗಳ ವಿರುದ್ಧ ಹಳೆ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಇವರು ಜೈಲಿನಿಂದಲೇ ಸಂಚು ರೂಪಿಸಿದ್ದ ಕುರಿತು ಆರೋಪವಿದೆ.

ಮುಬಾರಕ್‌ ಅಲಿಯಾಸ್‌ ಡಿಚ್ಚಿ ಮುಬಾರಕ್‌ ಜೈಲಿನಿಂದ ಭದ್ರಾವತಿಯ ಟಿಪ್ಪು ನಿಗೆ ಕರೆ ಮಾಡಿ ಸುಫಾರಿ ನೀಡಿದ್ದ. ಭದ್ರಾವತಿ ಗಾಂಧಿ ಸರ್ಕಲ್‌ ಬಳಿ ಬಸವರಾಜ್ ಅವರನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು ಇತರೆ ನಾಲ್ವರನ್ನು ಮುಬಾರಕ್ ಕಳುಹಿಸಿದ್ದ. ಸುಫಾರಿ ಪಡೆದಿದ್ದ ಟಿಪ್ಪುನನ್ನು ಪೊಲೀಸರು ಬಂಧಿಸಿದ್ದಾರೆ.

Advertisements

ಈ ಸಂಬಂಧ ಗುತ್ತಿಗೆದಾರ ಸುನಿಲ್‌ ಎಂಬವರು ದೂರು ನೀಡಿದ್ದಾರೆ. ಟಿಪ್ಪುವನ್ನು ಗುತ್ತಿಗೆದಾರ ಸುನಿಲ್‌ ಭೇಟಿಯಾದಾಗ ಆತನಿಗೆ ಕೂಡ ಡಿಚ್ಚಿ ಮುಬಾರಕ್‌ ಕರೆ ಮಾಡಿದ್ದಾನೆ. ಕಾರು ಮತ್ತು ನಾಲ್ವರನ್ನು ಕಳುಹಿಸುತ್ತಿರುವುದಾಗಿ ಮುಬಾರಕ್ ಹೇಳಿದ್ದಾನೆ. ಭದ್ರಾವತಿ ಹಳೆ‌‌ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X