ಯಾರೇ ವಿರೋಧ ಮಾಡಿದರೂ ನೀರಿನ ದರ ಏರಿಕೆ ಅನಿವಾರ್ಯ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

Date:

Advertisements

ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂಎಸ್ಎಸ್‌ಬಿ ಕಷ್ಟ ಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

“ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ” ಎಂದರು.

Advertisements

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

“14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ” ಎಂದು ಹೇಳಿದರು.

ನಾನಿರುವ ತನಕ ಖಾಸಗೀಕರಣ ಆಗುವುದಿಲ್ಲ

“ಬಿಡಬ್ಲ್ಯೂಎಸ್ಎಸ್‌ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ” ಎಂದರು.

ಮೇಕೆದಾಟು: ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಂಬಿಕೆ ಇದೆ

“ನಾನು ಅಧಿಕಾರವಹಿಸಿಕೊಂಡ ತಕ್ಷಣ 6 ಎಂಎಲ್ ಡಿ ನೀರು ಸರಬರಾಜನ್ನು ಹೆಚ್ಚಳ ಮಾಡಲಾಗಿದೆ. ತಮಿಳುನಾಡಿಗೆ ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ಕಾವೇರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ನಮ್ಮಲ್ಲಿ ಮತ್ತೊಂದು ಅಣೆಕಟ್ಟು ಇದ್ದಿದ್ದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಮೇಕೆದಾಟು ಯೋಜನೆ ನ್ಯಾಯಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ”ಎಂದರು.

“ಕೆಆರ್‌ಎಸ್ ಯಿಂದಲೇ ನೇರವಾಗಿ ನಗರಕ್ಕೆ ನಿಗದಿಯಾದ ನೀರನ್ನು ತರಬಹುದು ಎಂದು ಒಂದಷ್ಟು ಜನ ವರದಿ ಕೊಟ್ಟಿದ್ದಾರೆ. ಶರಾವತಿಯಿಂದ ನೀರು ತರಬೇಕು ಎನ್ನುವ ಆಲೋಚನೆಯಿದೆ. ಅಲ್ಲಿನ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ರಾಜಕಾರಣದಿಂದ ಅಲ್ಲಲ್ಲಿ ಬೇರೆ, ಬೇರೆ ಕಡೆ ತಿರುವು ಪಡೆದುಕೊಂಡಿದೆ. ಇದನ್ನೂ ಸಹ ಒಂದು ಹಂತಕ್ಕೆ ತಲುಪಿಸಿದ್ದೇನೆ. ಕಾವೇರಿ 5 ನೇ ಹಂತದ ಕಾಮಗಾರಿಗೆ ನಿಂತಿದ್ದು ಮತ್ತೆ ಚಾಲನೆ ಮಾಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X