ಚಿಕ್ಕಬಳ್ಳಾಪುರ | ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾಗಿ ನಂದಕುಮಾರ್: ಕಾರ್ಯಕರ್ತರಲ್ಲಿ ಸಂಭ್ರಮ

Date:

Advertisements

ಪಕ್ಷ ಸಂಘಟನೆ, ನಿಸ್ವಾರ್ಥ ಸೇವೆ ಆಧಾರದಲ್ಲಿ ಕಾಂಗ್ರೆಸ್ ಮುಖಂಡ ನಂದಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಸಿಕ್ಕ ಕೂಡಲೇ ರಾಜ್ಯಾಧ್ಯಕ್ಷರನ್ನು ಸನ್ಮಾನಿಸಿದ ನೂರಾರು ಕಾರ್ಯಕರ್ತರು, ನಗರದಲ್ಲಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು.

ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದ ನಂದಕುಮಾರ್, ‘ಕಾರ್ಮಿಕ ಇಲಾಖೆಯ ಸಣ್ಣಪುಟ್ಟ ಲೋಪಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು, ನಿಷ್ಠೆಯಿಂದ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ’ ಎಂದರು.

ಬಾಲಕಾರ್ಮಿಕ ಪದ್ಧತಿ ಸಮಾಜದ ಪಿಡುಗಾಗಿದೆ. ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ. ಯಾರಾದರೂ ಬಾಲ ಕಾರ್ಮಿಕರನ್ನು ದುಡಿಸಿಕೊಂಡಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisements
ನಂದಕುಮಾರ್‌ ಆಯ್ಕೆ 2

ಕಾಂಗ್ರೆಸ್ ಹಿರಿಯ ನಾಯಕ ಮಂಡಿಕಲ್ ಕುಪೇಂದ್ರ ಮಾತನಾಡಿ, ಕೆಪಿಸಿಸಿಯಿಂದ ನಂದ ಕುಮಾರ್ ಅವರಿಗೆ ಅಧಿಕಾರ ಸಿಕ್ಕಿರುವುದು ಸ್ವಾಗತಾರ್ಹ ಎಂದರು.

ಪರ್ಲ್ ಸಂಸ್ಥೆಯ ನಿರ್ದೇಶಕ ಮತ್ತು ವರ್ಣ ಸೇವಾ ಟ್ರಸ್ಟಿನ ಅಧ್ಯಕ್ಷ ಜಿ.ಉಮೇಶ್ ಮಾತನಾಡಿ, ಕಿರಿಯ ವಸ್ಸಿನಲ್ಲಿ ಇಂತಹ ಅವಕಾಶ ಪಡೆದುಕೊಂಡಿರುವುದಕ್ಕೆ ನಂದಕುಮಾರ್ ಅವರ ಪ್ರಾಮಾಣಿಕ ಸೇವೆ ಕಾರಣ. ಪಕ್ಷದ ನಂಬಿಕೆಗೆ ಬದ್ಧರಾಗಿ ಉತ್ತಮ ಸೇವೆ ಸಲ್ಲಿಸಿ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಜಮಾಅತೆ ಅಹ್ಲೇ ಇಸ್ಲಾಂ ಚುನಾವಣೆ: ಚುನಾವಣಾಧಿಕಾರಿ ಬದಲಾವಣೆಗೆ ಒತ್ತಾಯ

ಈ ವೇಳೆ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಡ್ಯಾನ್ಸ್ ಶ್ರೀನಿವಾಸ್, ಆರ್ಯ ಅಧ್ಯಕ್ಷರು ಪರ್ಲ್ ಪೌಂಡೇಶನ್ ನ ಡಾಕ್ಟರ್ ರಜನೇಶ್, ರೂಪ ಕುಮಾರ್, ದಿನೇಶ್ ಎಸ್ ಗೌಡ, ಲಕ್ಷ್ಮಿಪತಿ, ಮಂಜುನಾಥ್, ಮೋಲ್ಡ್ ವೆಂಕಟೇಶ್, ರಾಮಚಂದ್ರಪ್ಪ, ಜಿ ಟಿ ಮಂಜುನಾಥ್, ನಾಗೇಶ್ ಗೌಡ ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X