ಚಿಕ್ಕಮಗಳೂರು | ಕೊಳಚೆ ನಿವಾಸಿಗಳಿಗೆ ನಿವೇಶನ ನೀಡುವಂತೆ ಕರ್ನಾಟಕ ಜನಶಕ್ತಿ ಒತ್ತಾಯ

Date:

Advertisements

ಕೊಳಚೆ ನಿವಾಸಿಗಳಿಗೆ ನಿವೇಶನ ನೀಡುವಂತೆ ಭೂಮಿ ಹಾಗೂ ವಸತಿ ವಂಚಿತರು ಆಗ್ರಹಿಸಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದ ಅಂಬೇಡ್ಕರ್ ವೃತ್ತದಿಂದ ಬಿ ಎಚ್ ರಸ್ತೆ ಮೂಲಕ ತಾಲೂಕು ಕಚೇರಿವರೆಗೂ ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನೆ ನಡೆಸಿದರು.

ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಭೂಮಿ ಹಾಗೂ ವಸತಿ ವಂಚಿತರು ಪ್ರತಿಭಟನೆ ನಡೆಸಿದ್ದು, ಕಡೂರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

, “ಸುಮಾರು 2018ರಲ್ಲಿ ಕಡೂರು ಗ್ರಾಮದ ಸರ್ವೆ ನಂ.53 ವಾರ್ಡ್ ನಂಬರ್ 19ರ ಜಾಗದಲ್ಲಿ 40-50 ವರ್ಷಗಳಿಂದ ವಾಸವಾಗಿದ್ದ ಬಡ ಜನರನ್ನು ಏಕಾಏಕಿ ಖಾಲಿ ಮಾಡಿಸಿದ್ದು, ಜೆಸಿಬಿ ಯಂತ್ರಗಳನ್ನು ತಂದು ನೆಲಸಮ ಮಾಡಿದ್ದಾರೆ. ಅದರಲ್ಲಿ ಕೆಲವರಿಗೆ ಹಕ್ಕು ಪತ್ರಗಳಿದ್ದು, ಕಂದಾಯ ಕೂಡ ಪಾವತಿ ಮಾಡುತ್ತಿದ್ದಾರೆ. ಆದರೂ ಕೂಡಾ ಏಕಾಏಕಿ ಖುಲ್ಲಾ ಮಾಡಿ ಬದಲಿ ಪರ್ಯಾಯ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಇಷ್ಟು ವರ್ಷಗಳಾದರೂ ನಿವೇಶನ ನೀಡಲಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisements

“ಈ ಹಿಂದೆ ಇದ್ದ ಜಿಲ್ಲಾಧಿಕಾರಿಗೆ ಪ್ರತಿಭಟನೆ ಮಾಡುವ ಮೂಲಕ ಎಷ್ಟೋ ಬಾರಿ ಮನವಿ ಮಾಡಿದರೂ ಕೂಡಾ ಯಾವುದೇ ಅಧಿಕಾರಿಗಳು ಗಮನಹರಿಸಲಿಲ್ಲ. ಈವರೆಗೂ ಯಾವುದೇ ನಿವೇಶನ ನೀಡದೆ ಇರುವುದರಿಂದ ಅಲ್ಲಿ ವಾಸವಾಗಿದ್ದ ಎಲ್ಲ ಕುಟುಂಬಗಳೂ ಕೂಡ ಅತಂತ್ರ ಪರಿಸ್ಥಿತಿಯಲ್ಲಿ ಬದುಕು ನಡೆಸಬೇಕಾಗಿದೆ. ಕೂಲಿ ನಾಲಿ ಮಾಡಿ ಮನೆ ಬಾಡಿಗೆ ಕಟ್ಟಲು ಅಸಾಧ್ಯವಾಗಿದ್ದು, ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಕಷ್ಟಕರವಾಗಿದೆ. ಆದ್ದರಿಂದ ತಾವು ದಯಮಾಡಿ ಕೊಳಚೆ ಪ್ರದೇಶದಿಂದ ಖುಲ್ಲಾ ಮಾಡಿರುವ ಕುಟುಂಬಗಳಿಗೆ ಸರ್ವೆ ನಂ.53ರಲ್ಲಿ ನಿವೇಶನ ಕೊಡಬೇಕು” ಎಂದು ಒತ್ತಾಯಿಸಿದರು.

ಸರ್ವೆ ನಂ.53ರಲ್ಲಿ ನಿವೇಶನ ಕೊಡದಿದ್ದಲ್ಲಿ ಪರ್ಯಾಯವಾಗಿ ಸರ್ವೆ ನಂ.3ರಲ್ಲಿ ಖಾಲಿಯಿರುವ ಸರ್ಕಾರಿ ಜಾಗದಲ್ಲಿ ನಿವೇಶನ ಮಂಜೂರು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಕೋಟಿ ವಿಮೆಗಾಗಿ ಸತ್ತಂತೆ ನಟನೆ; ನಾಪತ್ತೆಯಾಗಿದ್ದವ ಪೊಲೀಸರಿಗೆ ಸಿಕ್ಕಿದ್ದು ಹೇಗೆ?

ಪ್ರತಿಭಟನೆಯಲ್ಲಿ ದಸಂಸ ಮುಖಂಡ ಮಂಜುನಾಥ್, ಶ್ರೀಕಾಂತ್, ಕರ್ನಾಟಕ ಜನಶಕ್ತಿಯ ಗೌಸ್ ಮೊಹದ್ದೀನ್, ಮುನ್ನ, ರೈತ ಸಂಘದ ನಿರಂಜನ್ ಮೂರ್ತಿ ಸೇರಿದಂತೆ ಭೂಮಿ ಇಲ್ಲದ ಬಡಜನರು, ಸ್ಥಳೀಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X