ನಟ ನಾಗಾರ್ಜುನ ಒಡೆತನದ ಅದ್ದೂರಿ ಕನ್ವೆನ್ಷನ್‌ ಹಾಲ್ ಧ್ವಂಸ

Date:

Advertisements

ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಮಾದಾಪುರದಲ್ಲಿರುವ ಅದ್ದೂರಿ ಕನ್ವೆನ್ಷನ್‌ ಹಾಲ್ ಅನ್ನು ಧ್ವಂಸಗೊಳಿಸಿದ್ದಾರೆ.

ತುಮ್ಮಿಡಿ ಕುಂಟಾ ಹೊಂಡವನ್ನು ಒತ್ತುವರಿ ಮಾಡಿ ಕನ್ವೆನ್ಷನ್‌ ಹಾಲ್ ನಿರ್ಮಿಸಿದ್ದಾರೆ ಎಂಬ ಆರೋಪ ನಾಗಾರ್ಜುನ ಮೇಲಿದೆ. ಆದರೆ ಜಮೀನು ಪಟ್ಟಾ ಜಮೀನಾಗಿದ್ದು, ಒಂದು ಇಂಚು ತುಮ್ಮಿಡಿ ಕುಂಟಾ ಹೊಂಡ ಕೂಡ ಒತ್ತುವರಿಯಾಗಿಲ್ಲ ಎಂದು ನಟ ಹೇಳಿದ್ದಾರೆ.

“ಹೈಡ್ರಾ ಅಧಿಕಾರಿಗಳು ಇಂದು ಬೆಳಿಗ್ಗೆ ಎನ್ ಕನ್ವೆನ್ಷನ್‌ ಹಾಲ್ ಅನ್ನು ಕೆಡವಲು ಪ್ರಾರಂಭಿಸಿದ್ದಾರೆ. ಭೂಮಿ ಎಫ್‌ಟಿಎಲ್ ವಲಯಕ್ಕೆ ಸೇರಿದ್ದಾಗಿರುವುದರಿಂದ ನೆಲಸಮ ಮಾಡುವ ಕಾರ್ಯವು ಸುಗಮವಾಗಿ ನಡೆಯಲು ನಾವು ಪೊಲೀಸ್ ಪಡೆಗಳನ್ನು ಅಲ್ಲಿ ನಿಯೋಜಿಸಿದ್ದೇವೆ” ಎಂದು ಮಾದಾಪುರ ಡಿಸಿಪಿ ಹೇಳಿದರು.

Advertisements

ಇದನ್ನು ಓದ್ದಿದ್ದೀರಾ? ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ನಟ ನಾಗಾರ್ಜುನ, “ತಡೆಯಾಜ್ಞೆಗಳು ಮತ್ತು ನ್ಯಾಯಾಲಯದ ಪ್ರಕರಣಗಳ ನಡುವೆಯೂ ಎನ್ ಕನ್ವೆನ್ಷನ್‌ ಅನ್ನು ಕಾನೂನುಬಾಹಿರ ರೀತಿಯಲ್ಲಿ ಕೆಡವಿರುವುದು ನೋವಾಗಿದೆ” ಎಂದಿದ್ದಾರೆ.

“ನನ್ನ ಪ್ರತಿಷ್ಠೆಯನ್ನು ರಕ್ಷಿಸಲು ಕೆಲವು ಸಂಗತಿಗಳನ್ನು ದಾಖಲಿಸಲು ಮತ್ತು ಕಾನೂನನ್ನು ಉಲ್ಲಂಘಿಸುವ ಯಾವುದೇ ಕ್ರಮಗಳನ್ನು ನಾವು ಮಾಡಿಲ್ಲ ಎಂದು ಸೂಚಿಸಲು ಈ ಹೇಳಿಕೆಯನ್ನು ನೀಡುವುದು ಸೂಕ್ತವೆಂದು ನಾನು ಭಾವಿಸಿದೆ. ಜಮೀನು ಪಟ್ಟಾ ಜಮೀನಾಗಿದ್ದು, ಒಂದು ಇಂಚು ಕೂಡಾ ಟ್ಯಾಂಕ್ ಭೂಮಿ ಒತ್ತುವರಿಯಾಗಿಲ್ಲ” ಎಂದು ತಿಳಿಸಿದ್ದಾರೆ.

“ಖಾಸಗಿ ಜಮೀನಿನೊಳಗೆ ನಿರ್ಮಿಸಲಾದ ಕಟ್ಟಡವನ್ನು ಅಕ್ರಮವೆಂದು ಹೇಳಿ ಕಟ್ಟಡ ಕೆಡವಲು ಮುಂದಾದ ಈ ಹಿಂದಿನ ಎಲ್ಲಾ ನೋಟಿಸ್‌ಗೆ ತಡೆಯಾಜ್ಞೆ ಆದೇಶವಿದೆ. ಆದರೆ ಸ್ಪಷ್ಟವಾಗಿ, ತಪ್ಪು ಮಾಹಿತಿಯ ಆಧಾರದ ಮೇಲೆ ಈಗ ಕೆಡವಲಾಗಿದೆ” ಎಂದು ಹೇಳಿದ್ದಾರೆ.

“ಇಂದು ಬೆಳಗ್ಗೆ ಕೆಡವುವ ಮುನ್ನ ಯಾವುದೇ ಸೂಚನೆ ನೀಡಿಲ್ಲ. ಕಾನೂನು ಪಾಲಿಸುವ ಪ್ರಜೆಯಾಗಿ, ಪ್ರಕರಣದ ವಿಚಾರಣೆ ಬಾಕಿ ಇರುವ ನ್ಯಾಯಾಲಯವು ನನ್ನ ವಿರುದ್ಧ ತೀರ್ಪು ನೀಡಿದ್ದರೆ, ನಾನೇ ಧ್ವಂಸಗೊಳಿಸುತ್ತಿದ್ದೆ” ಎಂದು ಆರೋಪಿಸಿದ್ದಾರೆ.

“ನಾನು ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದೇನೆ ಎಂಬ ತಪ್ಪು ಅಭಿಪ್ರಾಯವನ್ನು ಸರಿಪಡಿಸುವ ಉದ್ದೇಶದಿಂದ ನಾನು ಈ ಮಾಹಿತಿ ನೀಡುತ್ತಿದ್ದೇನೆ. ಅಧಿಕಾರಿಗಳು ನಡೆಸಿದ ತಪ್ಪು ಕ್ರಮಗಳಿಗೆ ಸಂಬಂಧಿಸಿದಂತೆ ನಾವು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆ” ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X