ಬಿಜೆಪಿ ಋಣ ಸಂದಾಯ ಮಾಡಲು ಸರ್ಕಾರವನ್ನು ಟೀಕಿಸುತ್ತಿರುವ ಎಸ್‌ ಎಲ್‌ ಭೈರಪ್ಪ: ರಮೇಶ್‌ ಬಾಬು

Date:

Advertisements

ಕರ್ನಾಟಕದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ನ್ಯಾಯಾಂಗದ ಅಂಗಳದಲ್ಲಿ ಇರುತ್ತದೆ. ಸಾಹಿತಿ ಎಸ್ ಎಲ್ ಭೈರಪ್ಪನವರು ತಮ್ಮ ಎಂದಿನ ಚಾಳಿಯಂತೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಲು ಹೊರಟಿರುವುದು ಅವರ ಮನಸ್ಥಿತಿಗೆ ಹಿಡಿದ ಕನ್ನಡಿ ಎಂದು ಮಾಜಿ ಎಮ್‌ಎಲ್‌ಸಿ ಮತ್ತು ದೇವರಾಜ ಅರಸು‌ ಟ್ರಕ್ ಟರ್ಮಿನಲ್‌ ಅಧ್ಯಕ್ಷ ರಮೇಶ್‌ ಬಾಬು ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕೇಂದ್ರ ಸರ್ಕಾರದಿಂದ ಭೈರಪ್ಪ ಪಡೆದಿರುವ 6 ಪ್ರಶಸ್ತಿಗಳಲ್ಲಿ 5 ಪ್ರಶಸ್ತಿಗಳು ಬಿಜೆಪಿ ಕಾರಣದಿಂದಲೇ ದೊರಕಿರುತ್ತದೆ. ಋಣ ಸಂದಾಯದ ಕಾರಣಕ್ಕಾಗಿ ರಾಜ್ಯ ಸರ್ಕಾರವನ್ನು ಟೀಕಿಸಿ ರಾಜ್ಯಪಾಲರನ್ನು ಸಮರ್ಥಿಸಿ ಅರೆ ಸಂವಿಧಾನ ತಜ್ಞರಾಗಲು ಹೊರಟಿದ್ದಾರೆ” ಎಂದು ಕುಟುಕಿದ್ದಾರೆ.

“ಸರ್ವೋಚ್ಚ ನ್ಯಾಯಾಲಯ ರಿಟ್ ಪಿಟಿಷನ್ ನಂ. 1224/2023 ಪ್ರಕರಣದಲ್ಲಿ ಇತ್ತೀಚಿಗೆ ಆದೇಶವನ್ನು ನೀಡಿ ರಾಜ್ಯಪಾಲರ ಸಂವಿಧಾನ ಬಾಹಿರ ಕಾರ್ಯಗಳಿಗೆ ತನ್ನ ಅಸಮ್ಮತಿಯನ್ನು ವ್ಯಕ್ತ ಪಡಿಸಿರುತ್ತದೆ. ಇದೇ ಪ್ರಕರಣದಲ್ಲಿ ರಾಜ್ಯಪಾಲರು ವಿಧೇಯಕಗಳನ್ನು ತಡೆಹಿಡಿಯುವುದು ಸರಿಯಾದ ಕ್ರಮ ಅಲ್ಲವೆಂದು ಹೇಳಿರುತ್ತದೆ” ಎಂದಿದ್ದಾರೆ.

Advertisements

“ಪಶ್ಚಿಮ ಬಂಗಾಳ, ಕೇರಳ, ಪಂಜಾಬ್, ತೆಲಂಗಾಣ, ಚತ್ತಿಸ್ ಗಡ್ ಮತ್ತು ತಮಿಳುನಾಡು ಪ್ರಕರಣಗಳಲ್ಲಿ ರಾಜ್ಯಪಾಲರುಗಳ ನಡೆಯನ್ನು ಸರಿ ಅಲ್ಲವೆಂದು ಸರ್ವೋಚ್ಚ ನ್ಯಾಯಾಲಯ ಹೇಳಿರುತ್ತದೆ. ಮಧ್ಯಪ್ರದೇಶದ ಹೈ ಕೋರ್ಟ್ ತನ್ನ ತೀರ್ಪಿನಲ್ಲಿ ರಾಜ್ಯಪಾಲರು ಸಂವಿಧಾನದ ನಿಯಮಗಳಿಗೆ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಅನುಗುಣವಾಗಿ ತಮ್ಮ ತೀರ್ಮಾನವನ್ನು ತೆಗೆದುಕೊಳ್ಳಬೇಕೇ ಹೊರತು ತಮ್ಮ ವೈಯಕ್ತಿಕ ಅನಿಸಿಕೆಗಳಿಗೆ ಅನುಗುಣವಾಗಿ ಆದೇಶಗಳನ್ನು ನೀಡುವುದು ಅಥವಾ ವರ್ತಿಸುವುದು ತಪ್ಪೆಂದು ಬಹಳ ಸ್ಪಷ್ಟವಾಗಿ ಹೇಳಿರುತ್ತದೆ” ಎಂದು ಹೇಳಿದ್ದಾರೆ.

“ಸ್ವಯಂ ಘೋಷಿತ ವಿಶ್ವ ವಿಖ್ಯಾತ ಸಾಹಿತಿ ಅರೆ ಸಂವಿಧಾನ ತಜ್ಞ ಎಸ್ ಎಲ್ ಭೈರಪ್ಪನವರಿಗೆ ನ್ಯಾಯಪೀಠಗಳ ತೀರ್ಪುಗಳನ್ನು ಓದಲು ಬಹುಶಃ ಸಮಯದ ಕೊರತೆ ಇರಬಹುದು? ಬೈರಪ್ಪನವರು ಬಿಜೆಪಿ ಕೇಂದ್ರ ಸರ್ಕಾರದಲ್ಲಿ ರಾಜ್ಯಪಾಲರ ಹುದ್ದೆಯ ಆಮಿಷವನ್ನೂ ಪಡೆದಿರಬಹುದು!” ಎಂದು ವ್ಯಂಗ್ಯವಾಡಿದ್ದಾರೆ.

ಭೈರಪ್ಪನವರ ಸಾಹಿತ್ಯವನ್ನು ಬೇರೆ ಬೇರೆ ಸಂದರ್ಭಗಳಲ್ಲಿ ಅನೇಕರು ಟೀಕಿಸಿದ್ದಾರೆ. ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಯು ಆರ್ ಅನಂತಮೂರ್ತಿ ಅವರು ಇವರ ಆವರಣ ಕೃತಿಯ ಬಗ್ಗೆ ತಮ್ಮ ಅಭಿಪ್ರಾಯ ನೀಡಿ, ಭೈರಪ್ಪನವರ ಸಾಹಿತ್ಯ ಅಪಾಯಕಾರಿ ಮತ್ತು ಇವರ ಸಾಹಿತ್ಯ ಸಮಾಜಕ್ಕೆ ಮತ್ತು ಸಮುದಾಯಗಳಿಗೆ ಪೂರಕವಲ್ಲ ಎಂದು ಹೇಳಿದ್ದರು. ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಭೈರಪ್ಪನವರು ತಮ್ಮ ಸಾಹಿತ್ಯ ಮತ್ತು ಅಭಿಪ್ರಾಯಗಳನ್ನು ಸಂಪೂರ್ಣವಾಗಿ ಬಿಜೆಪಿಮಯಗೊಳಿಸಿದ್ದಾರೆ” ಎಂದಿದ್ದಾರೆ.

“ಮೊದಲಿನಿಂದಲೂ ಮೂಲಭೂತವಾದಗಳಿಗೆ ತಮ್ಮ ಸಾಹಿತ್ಯವನ್ನು ಸಮರ್ಪಣೆಗೊಳಿಸಿಕೊಂಡಿರುವ ಭೈರಪ್ಪನವರು, ರಾಜ್ಯಪಾಲರ ನಡೆಯನ್ನು ಪ್ರಶ್ನಿಸಬಾರದು ಎಂದು ಹೇಳಿರುವುದು ಅವರ ಮನಸ್ಥಿಗೆಗೆ ಅನುಗುಣವಾಗಿ ಇರುತ್ತದೆ. ಭೈರಪ್ಪನವರು ಇಂತಹ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುವ ಬದಲು ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ಚಟುವಟಿಕೆಗಳಲ್ಲಿ ಹೇಳಿದರೆ ಹೆಚ್ಚು ಚಪ್ಪಾಳೆ ಗಿಟ್ಟಿಸಬಹಹುದು” ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

“ನಮ್ಮ ದೇಶದಲ್ಲಿ ಬೊಮ್ಮಾಯಿ ಪ್ರಕರಣವನ್ನು ಒಳಗೊಂಡಂತೆ ಇತ್ತೀಚಿನ ತಮಿಳುನಾಡು ರಾಜ್ಯಪಾಲರ ಪ್ರಕರಣದವರೆಗೆ ಸುಪ್ರೀಂ ಕೋರ್ಟ್ ಹಲವಾರು ತೀರ್ಪುಗಳನ್ನು ನೀಡಿರುತ್ತದೆ ಮತ್ತು ರಾಜ್ಯಪಾಲರ ನಡೆ ಒಕ್ಕೂಟ ವ್ಯವಸ್ಥೆಗೆ ಪೂರಕವಾಗಿರಬೇಕು ಮತ್ತು ಸಂವಿಧಾನದ ಅಡಿಯಲ್ಲಿ ದತ್ತವಾದ ಅಧಿಕಾರಗಳನ್ನು ಮಾತ್ರ ಚಲಾಯಿಸಬೇಕು ಎಂದು ಹೇಳಿರುತ್ತದೆ. ರಾಜ್ಯಪಾಲರು ಚುನಾಯಿತ ಸರ್ಕಾರಗಳ ಮೇಲೆ ಸವಾರಿ ಮಾಡಲು ಹೊರಟರೆ ಅದು ಜನಾಭಿಪ್ರಾಯಕ್ಕೆ ಮತ್ತು ಜನತಂತ್ರಕ್ಕೆ ಅಪಚಾರವಾಗುತ್ತದೆ. ರಾಜ್ಯಪಾಲರು ಕೇಂದ್ರ ಸರ್ಕಾರಗಳ ಸೂಚನೆಗಳಿಗೆ ಅನುಗುಣವಾಗಿ ರಾಜ್ಯ ಸರ್ಕಾರಗಳ ಆಡಳಿತದಲ್ಲಿ ಮೂಗು ತೂರಿಸಲು ಅವಕಾಶವಿಲ್ಲವೆಂದು ಸಂವಿಧಾನ ಮತ್ತು ನ್ಯಾಯಾಲಯಗಳು ಬಹಳ ಸ್ಪಷ್ಟವಾಗಿ ತಿಳಿಸಿರುತ್ತವೆ. ಆದರೆ ವಿಶ್ವ ವಿಖ್ಯಾತ ಸಾಹಿತಿಗಳಿಗೆ ಜಾಣಕುರುಡುತನ ಮತ್ತು ಕಿವುಡುತನ ಒಮ್ಮೊಮ್ಮೆ ಆವರಿಸಿಕೊಳ್ಳುತ್ತದೆ” ಎಂದಿದ್ದಾರೆ.

“ಎಸ್ ಎಲ್ ಭೈರಪ್ಪನವರು ಇಂತಹ ವಿಷಯಕ್ಕೆ ಮೂಗು ತೂರಿಸಿ ಮಾತನಾಡುವ ಬದಲು ಭಾರತೀಯ ಜನತಾ ಪಕ್ಷದಲ್ಲಿ ಯಾವುದಾದರೂ ಹುದ್ದೆಯನ್ನು ಬೇಡಿ ಪಡೆದುಕೊಂಡು ರಾಜಕೀಯ ಹೇಳಿಕೆಗಳನ್ನು ನೀಡಿದರೆ ಅದು ಸರಿಯಾದ ಕ್ರಮವಾಗುತ್ತದೆ. ಕೇವಲ ಯಾರನ್ನೋ ಮೆಚ್ಚಿಸಲು ಇಂತಹ ಹೇಳಿಕೆಗಳನ್ನು ನೀಡಿ ನಗೆಪಾಟಳೆಗೆ ಗುರಿಯಾಗಿ ಬೆತ್ತಲಾಗುವುದು ಬೇಡ. ಬಹುಶಃ ಇಂತಹ ಹೇಳಿಕೆಗಳ ಮೂಲಕ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿಶ್ವವಿದ್ಯಾಲಾಯಗಳಿಂದ ಮತ್ತೊಂದು ಗೌರವ ಡಾಕ್ಟರೇಟ್ ಪಧವಿಯ ನಿರೀಕ್ಷೆಯನ್ನು ಇಟ್ಟುಕೊಂಡಿರಬಹುದು. ಭೈರಪ್ಪನವರ ಈ ಹೇಳಿಕೆಗೆ ಬಿಜೆಪಿ ಆಡಳಿತದ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿದರೂ ಆಶ್ಚರ್ಯವಿಲ್ಲ” ಎಂದು ಲೇವಡಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X