ಗದಗ | ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ವಿರುದ್ಧ ಕ್ರಮ ಕೈಗೊಳ್ಳಬೇಕು: ಬಸವರಾಜ್ ಹಿರೇಮನಿ

Date:

Advertisements

ಅಕ್ರಮವಾಗಿ ಸಾರಾಯಿ ಮಾರಾಟ ಹಾಗೂ ಜಾತಿ ದೌರ್ಜನ್ಯ, ಅಸ್ಪೃಶ್ಯತೆ ಆಚರಣೆ ನಡೆಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣ ಬಂದಾಗ ರಾಜಕೀಯ ಹಾಗೂ ರಾಜಕಾರಣಿಗಳ ಒತ್ತಡಕ್ಕೆ ಮಣಿಯದೆ ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ಶೋಷಿತರ ಮೇಲಾಗುವ ಅನ್ಯಾಯವನ್ನು ತಡೆಗಟ್ಟಬೇಕು ಎಂದು ಬಸವರಾಜ್ ಹಿರೇಮನಿ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಸ್‌ಸಿ/ಎಸ್‌ಟಿ ಕುಂದು ಕೊರತೆ ಸಭೆಯನ್ನು ಪ್ರಥಮ ಬಾರಿಗೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿತ್ತು. ಜತೆಗೆ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಶಾಂತಿಸಭೆ ನಡೆಸಿದರು.

ಈ ವೇಳೆ ನಾಗರಾಜ ದೊಡ್ಡಮನಿ ಮಾತನಾಡಿ, “ಗೋವಿನಾಳ ಗ್ರಾಮದಲ್ಲಿ ಎಸ್‌ಸಿ ಸಮುದಾಯದವರಿಗೆ ದೇವಸ್ಥಾನಗಳಿಗೆ ಮತ್ತು ಕಟ್ಟಿಂಗ್‌ ಶಾಪ್‌ಗಳಿಗೆ ಹೋಗಲು ಇವತ್ತಿಗೂ ಅವಕಾಶ ಕೊಡುತ್ತಿಲ್ಲ. ಇದರ ಕುರಿತು ದಲಿತರೇ ಪ್ರಕರಣ ದಾಖಲಿಸುವ ಪೂರ್ವದಲ್ಲಿ ಪೊಲೀಸ್ ಇಲಾಖೆಯವರೇ ಖುದ್ದು ಪರಿಶೀಲಿಸಿ ದಲಿತರಿಗೆ ನ್ಯಾಯ ದೊರೆಕಿಸಿಕೊಡಲು ಮುಂದಾಗಬೇಕು” ಎಂದರು.

Advertisements

ಫಕಿರೇಶ ಭಜಂತ್ರಿ ಮಾತನಾಡಿ, “ದಲಿತ ಸಮುದಾಯಗಳಿಗೆ ಕಾನೂನಿನ ಅರಿವಿನ ಅಗತ್ಯವಿದೆ. ಆ ನಿಟ್ಟಿನಲ್ಲಿ ಶೋಷಿತ ಸಮುದಾಯಗಳಿಗೆ ಕಾನೂನು ಜಾಗೃತಿ ಸಭೆಗಳಾಗಬೇಕು” ಎಂದರು.

ರಾಘವೇಂದ್ರ ಪೂಜಾರ ಮಾತನಾಡಿ, “ಸಾರಿಗೆ ವಾಹನದಲ್ಲಿ ಅಲೆಮಾರಿ/ಅರೆಅಲೆಮಾರಿ ಜನರು ವ್ಯಾಪಾರಕ್ಕೆಂದು ಹೋಗುವಾಗ ಸಾರಿಗೆ ನಿರ್ವಾಹಕರು ಮತ್ತು ಚಾಲಕರು ಅವರ ಲಗೇಜ್ ಎತ್ತಿ ಹೊರಗೆ ಎಸೆಯುತ್ತಿದ್ದಾರೆ. ಇಂತಹ ಜಾತಿ ನಿಂದನೆ ವರ್ತನೆಗಳನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ನಿಲ್ಲಿಸಿ: ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಲಕ್ಷ್ಮೇಶ್ವರ ಪಿಎಸ್‌ಐ ಈರಣ್ಣ ರಿತ್ತಿ ಮಾತನಾಡಿ, “ಲಕ್ಷ್ಮೇಶ್ವರ ಪಟ್ಟಣದ ಮುನ್ಸಿಪಲ್ ಕಾಲೇಜ್ ಹಿಂಬಾಗದಲ್ಲಿ ಗುಡಿಸಲಲ್ಲಿ ವಾಸಿಸುವ ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯಗಳ ಗುಡಿಸಲುಗಳಲ್ಲಿ ಬೆಳಕಿಲ್ಲದೆ ಕತ್ತಲಲ್ಲಿ ವಾಸವಿದ್ದಾರೆ. ಈ ಸಮಸ್ಯೆ ಕುರಿತು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಲೈಟ್ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಸಭೆಯಲ್ಲಿ ಅನೇಕ ಸಮಸ್ಯೆಗಳ ಕುರಿತು ಚರ್ಚೆಯಾಗಿವೆ. ಅವೆಲ್ಲವುಗಳನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದು ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ವರದಿ : ಕೇಶವ ಕಟ್ಟಿಮನಿ ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X