ತುಮಕೂರಿನಲ್ಲಿ 244.02 ಕೋಟಿ ರೂ.ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ: ಸಚಿವ ವಿ.ಸೋಮಣ್ಣ ಸ್ಥಳ ಪರಿಶೀಲನೆ

Date:

Advertisements

ರಸ್ತೆ ಹಾಗೂ ರೈಲು ಸಾರಿಗೆಯನ್ನು ಇನ್ನಷ್ಟು ಸುಗಮ ಹಾಗೂ ಸುರಕ್ಷಿತವಾಗಿಸಲು ನಗರದಲ್ಲಿ ರೈಲ್ವೆ ಇಲಾಖೆಯಿಂದ ಕ್ಯಾತ್ಸಂದ್ರ, ಬಡ್ಡಿಹಳ್ಳಿ, ಬಟವಾಡಿ ಪ್ರದೇಶಗಳಲ್ಲಿ 244.02 ಕೋಟಿ ರೂ. ವೆಚ್ಚದಲ್ಲಿ 3 ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಜಲ ಶಕ್ತಿ ಮತ್ತು ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.

ತುಮಕೂರು ನಗರದ ಬಟವಾಡಿ ರೈಲ್ವೇಗೇಟ್ ಬಳಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಮೇಲ್ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ನಗರದಲ್ಲಿ 3, ನಗರದ ಹೊರ ವಲಯದ ಹರಿಯೂರು(ಮಲ್ಲಸಂದ್ರ) ಬಳಿ 1, ಗುಬ್ಬಿ ತಾಲ್ಲೂಕಿನ ನಿಟ್ಟೂರು ರೈಲ್ವೇ ಸ್ಟೇಷನ್ ಬಳಿ 1 ಸೇರಿ ಒಟ್ಟು 5 ರೈಲ್ವೆ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ನಗರದ ಕ್ಯಾತ್ಸಂದ್ರ ಸ್ಟೇಷನ್-ಮೈದಾಳ ಗೇಟ್ ನಡುವಿನ ಮೇಲ್ಸುತುವೆಗಾಗಿ 57.3 ಕೋಟಿ ರೂ., ಬಡ್ಡಿಹಳ್ಳಿ ಗೇಟ್ ಅಗ್ನಿಶಾಮಕ ದಳದ ಬಳಿ ಮೇಲ್ಸೇತುವೆ ನಿರ್ಮಾಣಕ್ಕಾಗಿ 89.03 ಕೋಟಿ ರೂ., ಬಟವಾಡಿ ಗೇಟ್ ಬಳಿ ಸೇತುವೆ ನಿರ್ಮಾಣಕ್ಕಾಗಿ 97.69 ಕೋಟಿ ರೂ., ಹರಿಯೂರು ರಸ್ತೆ ಬಳಿ ಮೇಲ್ಸೆತುವೆ ನಿರ್ಮಿಸಲು 55.99 ಕೋಟಿ ರೂ., ಹಾಗೂ ತುಮಕೂರು-ಮೈಸೂರು ರಸ್ತೆ ನಿಟ್ಟೂರು ರೈಲ್ವೆ ಸ್ಟೇಷನ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು 50.57 ಕೋಟಿ ರೂ. ಸೇರಿದಂತೆ 5 ಮೇಲ್ಸೆತುವೆಗಳ ನಿರ್ಮಾಣಕ್ಕೆ ಒಟ್ಟು 350 ಕೋಟಿ ರೂ.ಗಳಿಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

ಬಟವಾಡಿ ಬಳಿ ನಿರ್ಮಿಸಲಿರುವ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಸಾರ್ವಜನಿಕರೊಂದಿಗೆ ಚರ್ಚಿಸಿದ ಅವರು, ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕಾಮಗಾರಿ ನಿರ್ಮಾಣ ಮಾಡಲಾಗುವುದು. ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

Advertisements

ಕಾಮಗಾರಿ ನಡೆಯುವ ಸ್ಥಳಕ್ಕೆ ಸಂಬAಧಿಸಿದ ದಾಖಲೆ, ನೀರಿನ ಪೈಪ್ ಲೈನ್, ವಿದ್ಯುತ್ ಲೈನ್ ಸೇರಿದಂತೆ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಇಂಜಿನಿಯರ್‌ಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರ ಶಾಸಕ ಜ್ಯೋತಿ ಗಣೇಶ್, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ರೈಲ್ವೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X