ನಟ ದರ್ಶನ್​ ವಿರುದ್ಧ ಮತ್ತೆ ಮೂರು ಹೊಸ ಎಫ್ಐಆರ್​ ದಾಖಲು

Date:

Advertisements

ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ವಿಐಪಿ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್​ ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

Advertisements

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್‌ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಪ್ರಕರಣದಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X