ಈ ದಿನ ವರದಿ ಫಲಶೃತಿ | ವಡ್ಡರ ಸಮುದಾಯದ ಸಂಕಷ್ಟಕ್ಕೆ ಸ್ಪಂದಿಸಿದ ಜೇವರ್ಗಿ ತಹಶೀಲ್ದಾರ್‌

Date:

Advertisements

ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳಾದ ಬೀಸುವ ಕಲ್ಲು, ರುಬ್ಬುಗುಂಡು, ಖಲಗಲ್(ಅಸಗಲ್ಲ) ಸೇರಿದಂತೆ ಹಲವು ಕಲ್ಲಿನ ಉಪಕರಣಗಳು ಮಾರಾಟವಾಗದೆ ಸಂಕಷ್ಟದಲ್ಲಿದ್ದ ವಡ್ಡರ ಸಮುದಾಯದ ಬಳಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್‌ ಮತ್ತು ಸಾಮಾಜ ಕಲ್ಯಾಣ ಇಲಾಖೆಯ ಮುಖ್ಯಾಧಿಕಾರಿಗಳು ಭೇಟಿ ನೀಡಿದ್ದು, ವಡ್ಡರ ಸಮುದಾಯದ ಸಂಕಷ್ಷ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಕಲ್ಲು ಒಡೆದು, ಅದಕ್ಕೆ ಸುಂದರ ಆಕೃತಿ ಕೊಟ್ಟು ಅಡುಗೆ ಮನೆಯಲ್ಲಿ ಉಪಯೋಗಿಸುವ ಉಪಕರಣ ತಯಾರಕರ ಕುರಿತು ಈ ದಿನ.ಕಾಮ್ ಕಳೆದ ಆಗಸ್ಟ್ 17ರಂದು ಜೇವರ್ಗಿ | ಮಾರಾಟವಾಗದ ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳು; ಸಂಕಷ್ಟದಲ್ಲಿ ವ್ಯಾಪಾರಿಗಳು ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಅಲ್ಲದೇ, ಆ.20ರಂದು ವಿಡಿಯೋ ವರದಿ ಕೂಡ ಪ್ರಕಟಿಸಲಾಗಿತ್ತು.

ಈ ವರದಿಯನ್ನು ಗಮನಿಸಿದ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ್ ಅವರು ವಡ್ಡರ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ್ದು, ಸರ್ಕಾರದಿಂದ ಸೂಕ್ತ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

Advertisements
ವಡ್ಡರ ಸಮುದಾಯಕ್ಕೆ ತಹಶೀಲ್ದಾರ್‌ ಸ್ಪಂದನೆ

“ಸದ್ಯಕ್ಕೆ ಈ ವ್ಯಾಪ್ತಿಯಲ್ಲಿ ಎಲ್ಲಿಯೂ ಸರ್ಕಾರಿ ಜಾಗವಿಲ್ಲ. ಅಲ್ಲದೇ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಿವೇಶನ ಒದಗಿಸುವ ಯಾವುದೇ ಯೋಜನೆ ಇಲ್ಲದಿರುವುದರಿಂದ ಮುಂಬರುವ ದಿನಗಳಲ್ಲಿ ನಿವೇಶನ ವಂಚಿತರ ಪಟ್ಟಿಯಲ್ಲಿ ವಡ್ಡರ ಸಮುದಾಯದ ಐದು ಕುಟುಂಬಗಳ ಹೆಸರನ್ನು ಸೇರಿಸುತ್ತೇವೆ. ನಂತರ ಈ ಯೋಜನೆಯಲ್ಲಿ ನಿವೇಶನ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

ವಸತಿ ವಂಚಿತ ವಡ್ಡರ ಸಮುದಾಯಗಳ ಕುಟುಂಬಗಳ ಬಗ್ಗೆ eedina ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದ ವರದಿ

ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವಂತೆ ಹೇಳಿದ್ದು, “ನಾವು ಮತ್ತೊಮ್ಮೆ ಈ ಸಮುದಾಯಕ್ಕೆ ಭೇಟಿ ನೀಡುವಷ್ಟರಲ್ಲಿ ನಿಮ್ಮ ಮಕ್ಕಳನ್ನೆಲ್ಲ ಶಾಲೆಗೆ ದಾಖಲಿಸಿರಬೇಕು” ಎಂದು ಸೂಚನೆ ನೀಡಿದ್ದಾರೆ.

ಅಧಿಕಾರಿಗಳ ಭೇಟಿ

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮೈಷುಗರ್ ಸಕ್ಕರೆ ಕಾರ್ಖಾನೆಯ ₹181.84 ಕೋಟಿ ಸಾಲ ತೀರುವಳಿ: ಸಿ ಡಿ ಗಂಗಾಧರ್

ವಡ್ಡರ ಸಮುದಾಯದ ನಾಗುಬಾಯಿ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಅಧಿಕಾರಿಗಳು ಭೇಟಿ ನೀಡಿ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ವರದಿಯ ಮೂಲಕ ನಮ್ಮ ಸಮುದಾಯದ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದ ಈ ದಿನ.ಕಾಮ್‌ಗೆ ಧನ್ಯವಾದಗಳು” ಎಂದು ಸಂತಸ ವ್ಯಕ್ತಪಡಿಸಿದರು.

ತಹಶೀಲ್ದಾರ್ ಭೇಟಿಯ ವೇಳೆ ಸಮಾಜ ಕಲ್ಯಾಣ ಇಲಾಖೆಯ ಮುಖ್ಯಾಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೂಡ ಉಪಸ್ಥಿತರಿದ್ದರು.

WhatsApp Image 2024 08 26 at 7.56.13 PM edited
WhatsApp Image 2024 08 26 at 8.01.59 PM
ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X