ಕೊಪ್ಪಳ | ವಿದ್ಯುತ್ ಕಂಬ ಶಿಥಿಲ : ಆತಂಕದಲ್ಲಿ ಗ್ರಾಮಸ್ಥರು

Date:

Advertisements

ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ 2ನೇ ವಾರ್ಡ್‌ನ ದುರ್ಗಾ ದೇವಿ ದೇವಸ್ಥಾನ ಹಿಂದುಗಡೆಯ ವಿದ್ಯುತ್ ಕಂಬವೊಂದು ಸಂಪೂರ್ಣ ಶಿಥಲಗೊಂಡಿದ್ದು ಗ್ರಾಮಸ್ಥರು ಆತಂಕದಲ್ಲೇ ಓಡಾಡುವಂತಾಗಿದೆ.

ವಿದ್ಯುತ್ ಕಂಬ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ. ಕಂಬ ಯಾವಾಗ ಮುರಿದು ಬೀಳುತ್ತೋ ಎಂಬ ಭಯ ಇಲ್ಲಿಯ ನಿವಾಸಿಗಳಿಗೆ ಕಾಡುತ್ತಿದೆ. ಶಿಥಿಲಗೊಂಡ ಕಂಬ ಬದಲಾಯಿಸದ ಜೆಸ್ಕಾಂ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆʼ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ʼಓಣಿಯಲ್ಲಿ ಮಕ್ಕಳು ಸೇರಿದಂತೆ ಸಾರ್ವಜನಿಕರು ದಿನನಿತ್ಯ‌ ಶಿಥಿಲಗೊಂಡ ವಿದ್ಯುತ್ ಕಂಬದ ಹತ್ತಿರದಿಂದಲೇ ತಿರುಗಾಡುತ್ತಾರೆ. ಏನಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆಗಾರರಾಗುತ್ತಾರೆ. ಕೂಡಲೇ ಕಂಬ ತೆರವುಗೊಳಿಸಬೇಕುʼ ಎಂದು ಆಗ್ರಹಿಸಿದರು.

Advertisements
WhatsApp Image 2024 08 27 at 3.09.06 PM
ಸಂಪೂರ್ಣ ಶಿಥಿಲಗೊಂಡ ವಿದ್ಯುತ್‌ ಕಂಬ

ಗ್ರಾಮದ ನಿವಾಸಿ ಯಮನೂರಪ್ಪ ಮಾತನಾಡಿ, ʼವಿದ್ಯುತ್ ಕಂಬದ ಕೆಳಭಾಗದಲ್ಲಿ ಸಿಮೆಂಟ್ ಉದುರಿದ ಪರಿಣಾಮ, ಕಬ್ಬಿಣದ ಸರಳುಗಳು ತೇಲಿ ಸ್ಟ್ರೀಟ್‌ ಲೈಟ್ ಪೋಲ್ ಮುರಿದು ಬೀಳುವ ಹಂತಕ್ಕೆ ತಲುಪಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಹಾಗೂ ಜೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಗಮನಕ್ಕೆ ತಂದರೂ ಪ್ರಯೋಜನ ಆಗಲಿಲ್ಲ. ಆಕಸ್ಮಾತ್ ಕಂಬ ಮುರಿದು ಅಪಾಯ ಸಂಭವಿಸಿದರೆ ಅದಕ್ಕೆ ಜೆಸ್ಕಾಂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆʼ ಎಂದು ಹೇಳಿದರು .

ʼಗ್ರಾಮದ ಇತರೆ ವಾರ್ಡ್‌ಗಳಲ್ಲಿ ಕೆಲ ಕಂಬಗಳು ಶಿಥಿಲಗೊಂಡು ಮುರಿದು ಬೀಳುವ ಹಂತಕ್ಕೆ ತಲುಪಿವೆ. ಯಾವುದೇ ಅಹಿತಕರ ಘಟನೆ ಜರುಗುವ ಮುಂಚೆ ಜೆಸ್ಕಾಂ ಶಾಖಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಸರಿಪಡಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಒಲವಿನ ಬಾಂಧವ್ಯ ಬೆಸೆದ ʼವನಭೋಜನʼ!

ಜೆಸ್ಕಾಂ ಅಧಿಕಾರಿಗಳು ವಾರ್ಡಿನ ನಿವಾಸಿಗಳ ಜೀವದ ಜೊತೆ ಆಟವಾಡುತ್ತಿರುವುದು ವಿಪರ್ಯಾಸ. ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತು ಕ್ರಮ ಕೈಗೊಂಡು ಮುಂದಿನ ಅನಾಹುತಕ್ಕೆ ಕಡಿವಾಣ ಹಾಕುವರೇ ಎಂಬುದನ್ನು ಕಾದು ನೋಡಬೇಕು.

mdrafi
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X