ವಿಜಯನಗರ | ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು : ಪೌರಾಯುಕ್ತ ಅಮಾನತಿಗೆ ಆಗ್ರಹ

Date:

Advertisements

ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ ಸದಸ್ಯರು, ವಿವಿಧ ಸಂಘಟನೆಗಳು ಧರಣಿ ನಡೆಸಿದರು.

ನಗರಸಭೆ ಕಚೇರಿ ಮುಂಭಾಗ ಪ್ರತಿಭಟಿಸಿ ಬಾಲಕನ ಸಾವಿಗೆ ನಗರಸಭೆ ಪೌರಾಯುಕ್ತರ ನಿರ್ಲಕ್ಷ್ಯದಿಂದ ಬಾಲಕ ಜೀವ ಹೋಗಿದೆ. ನೀರಿನ ಹೊಂಡ ಇರುವ ಬಗ್ಗೆ 15 ದಿನಗಳ ಮುಂಚೆಯೇ ಪೌರಾಯುಕ್ತರ ಗಮನಕ್ಕೆ ತರಲಾಗಿತ್ತು. ಗುಂಡಿ ಮುಚ್ಚಲು ತಿಳಿಸಿದರೂ ಕ್ಯಾರೇ ಎನ್ನಲಿಲ್ಲʼ ಎಂದು ಕಿಡಿಕಾರಿದರು.

ಕಳೆದ ಶುಕ್ರವಾರ ಮಧ್ಯಾಹ್ನ ಬಾಲಕ ವಿರಾಟ್ ಆಟವಾಡಲು ಮನೆಯಿಂದ ಹೊರ ಹೋದ ಬಳಿಕ ಮನೆಗೆ ವಾಪಸ್‌ ಬರಲಿಲ್ಲ. ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಾಡಿದರು ಸುಳಿವು ಸಿಗಲಿಲ್ಲ. ಬಳಿಕ ಬಾಲಕ ನೀರಿನ ಗುಂಡಿಯಲ್ಲಿ ಬಿದ್ದು ಮೃತಪಟ್ಟಿರುವುದು ದೃಢವಾಗಿತ್ತು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X