ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ಆಗಸ್ಟ್ 30ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಈ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ಗೆ ಹಿನ್ನಡೆಯಾಗಿದೆ.
ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮಾಡಿರುವ ಹಿಮಂತ ಬಿಸ್ವಾ ಶರ್ಮಾ, “ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ ಚಂಪೈ ಸೊರೇನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಲ್ಪ ಸಮಯದ ಹಿಂದೆ ಭೇಟಿಯಾದರು. ಚಂಪೈ ಸೊರೇನ್ ಅವರು ಅಧಿಕೃತವಾಗಿ ಆಗಸ್ಟ್ 30ರಂದು ರಾಂಚಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.
Former Chief Minister of Jharkhand and a distinguished Adivasi leader of our country, @ChampaiSoren Ji met Hon’ble Union Home Minister @AmitShah Ji a short while ago. He will officially join the @BJP4India on 30th August in Ranchi. pic.twitter.com/OOAhpgrvmu
— Himanta Biswa Sarma (@himantabiswa) August 26, 2024
ಈ ಹಿಂದೆ ಶರ್ಮಾ ಅವರು ಸೋಮವಾರ ರಾಂಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಚಂಪೈ ಅವರು ಬಿಜೆಪಿಗೆ ಸೇರಬೇಕೆಂದು ತಾನು ಬಯಸುವುದಾಗಿ ಹೇಳಿದ್ದರು.
“ಚಂಪೈ ಸೋರೆನ್ ಬಿಜೆಪಿ ಸೇರಬೇಕೆಂದು ನಾನು ಬಯಸುತ್ತೇನೆ. ಈಗ ಅವರು ದೆಹಲಿಯಲ್ಲಿದ್ದಾರೆ . ನೋಡೋಣ, ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತೇನೆ. ನಾನು ಅವರೊಂದಿಗೆ ಕಳೆದ 5-6 ತಿಂಗಳಿಂದ ಮಾತುಕತೆ ನಡೆಸುತ್ತಿದ್ದೆ. ಆದರೆ ಅದು ರಾಜಕೀಯವಾಗಿರಲಿಲ್ಲ. ಆದರೆ ಈಗ ಕೆಲವು ರಾಜಕೀಯ ವಿಚಾರ ಮಾತನಾಡುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.
ಚಂಪೈ ಸೊರೇನ್ ಪ್ರಸ್ತುತ ಹೇಮಂತ್ ಸೊರೆನ್ ಕ್ಯಾಬಿನೆಟ್ನಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೂ ಜೆಎಂಎಂ ಮತ್ತು ತನ್ನ ಸಚಿವ ಸ್ಥಾನ ಎರಡಕ್ಕೂ ರಾಜೀನಾಮೆ ನೀಡಿಲ್ಲ.
