ಬಾಗಲಕೋಟೆ | ಹಲವು ಬೆಳವಣಿಗೆಯ ನಡುವೆ ಮುಧೋಳ ನಗರಸಭೆ ಕಾಂಗ್ರೆಸ್ ತೆಕ್ಕೆಗೆ

Date:

Advertisements

ತೀವ್ರ ಪೈಪೋಟಿಯಿಂದ ಕೂಡಿದ್ದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಕಾಂಗ್ರೆಸ್ ಪಕ್ಷದ ಪಾಲಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡನ್ನೂ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಮೂಲಕ ಗಮನಾರ್ಹ ಗೆಲುವು ಸಾಧಿಸಿದೆ. ಒಟ್ಟು 31 ಸ್ಥಾನಗಳನ್ನು ಹೊಂದಿರುವ ಮುಧೋಳ ನಗರಸಭೆಗೆ ನಡೆದ ಚುನಾವಣೆಯಲ್ಲಿ ಗೆಲ್ಲಲು ಮ್ಯಾಜಿಕ್ ಸಂಖ್ಯೆ 17 ಬೇಕಾಗಿತ್ತು.

ಶಾಸಕ, ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದ ಕಾಂಗ್ರೆಸ್ ಪಕ್ಷವು 14 ಸದಸ್ಯರನ್ನು ಹೊಂದಿದ್ದು, ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ಕಾಂಗ್ರೆಸ್‌ ನ 3 ಸದಸ್ಯರನ್ನು ತನ್ನತ್ತ ಸೆಳೆದದ್ದು, ಕಾಂಗ್ರೆಸ್‌ಗೆ ಆತಂಕದ ಸ್ಥಿತಿ ತಂದೊಡ್ಡಿತ್ತು. ಆದರೂ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವೂ ತಂತ್ರಗಾರಿಕೆ ನಡೆಸಿ, ಆಪರೇಷನ್ ಹಸ್ತ ಮಾಡುವ ಮೂಲಕ ಬಿಜೆಪಿಯ 4 ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು. ಆ ಮೂಲಕ ಬಿಜೆಪಿಗೆ ತಿರುಗೇಟು ನೀಡಿ 1 ಪಕ್ಷೇತರ ಸದಸ್ಯರ ಬೆಂಬಲ ಗಳಿಸುವ ಮೂಲಕ ಮ್ಯಾಜಿಕ್ ಸಂಖ್ಯೆ 17 ತಲುಪುವಲ್ಲಿ ಯಶಸ್ವಿಯಾಯಿತು. ಈ ತಂತ್ರಗಾರಿಕೆಯ ಫಲವಾಗಿ ಬಿಜೆಪಿ 16 ಸ್ಥಾನ ತಲುಪಿ 1 ಸ್ಥಾನದ ಅಂತರದಿಂದ ಸೋಲು ಅನುಭವಿಸುವಂತಾಯಿತು.

WhatsApp Image 2024 08 26 at 7.06.16 PM

ಮುಧೋಳ ನಗರಸಭೆಗೆ ಕಾಂಗ್ರೆಸ್ ಪಕ್ಷದ ಸುನಂದಾ ಹನಮಂತ ತೇಲಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಸ್ವತಂತ್ರ ಅಭ್ಯರ್ಥಿ ಮೆಹಬೂಬ ಸಾಬ್ ಬಾಗವಾನ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪೂರ ಅವರ ತವರು ಕ್ಷೇತ್ರವಾಗಿದ್ದರಿಂದ ಈ ಗೆಲುವು ತುಂಬಾ ಮಹತ್ವ ಪಡೆದುಕೊಂಡಿದೆ.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ಇಬ್ಬರು ಶಾಸಕರಿದ್ದರೂ ದುರಸ್ತಿ ಕಾಣದ ಹಾಗರಗಾ ಮುಖ್ಯ ಹೆದ್ದಾರಿ; ಸ್ಥಳೀಯರಿಂದ ಹಿಡಿಶಾಪ

ಮುಧೋಳ ನಗರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿರುವುದು ಬಾಗಲಕೋಟೆ ಜಿಲ್ಲೆಯಲ್ಲಿ ತುಂಬಾ ಮಹತ್ವ ಕಂಡುಕೊಂಡಿದೆ. ಚುನಾವಣೆಯಲ್ಲಿ ಎರಡೂ ಪಕ್ಷಗಳು ಸ್ಪರ್ಧಿಸಿದ್ದು, ಅತ್ಯಂತ ನಿಕಟ ಸಂಖ್ಯೆಯ ಬಲ ಹೊಂದಿದ್ದರೂ ಕೆಲ ಕಾಂಗ್ರೆಸ್ ಪಕ್ಷದ ನಾಯಕರು ಸಚಿವ ತಿಮ್ಮಾಪೂರ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಜಿದ್ದಾಜಿದ್ದಿಗೆ ಬಿದ್ದು ಅಂತಿಮವಾಗಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯಿಂದ ಅಂತಿಮವಾಗಿ ಕಾಂಗ್ರೆಸ್ ಗೆಲುವಿಗೆ ಕಾರಣವಾಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಸಚಿವ ಆರ್.ಬಿ.ತಿಮ್ಮಾಪೂರ, ಸಹಕರಿಸಿದ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಮುಖಂಡ ಸಂಜಯ ತಳೇವಾಡ ಹಾಗೂ ಅವಿರತವಾಗಿ ಶ್ರಮಿಸಿದ ಇನ್ನಿತರ ಕಾಂಗ್ರೆಸ್ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X