ಬೇಲೂರು | ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ: ಶಾಸಕ ಲಿಂಗೇಶ್

Date:

Advertisements

ಮೋದಿ ಬಗ್ಗೆ ಎಲ್ಲರಿಗೂ ಅಭಿಮಾನವಿದೆ. ಆದರೆ, ಹಾಸನ ಜಿಲ್ಲೆಗೆ ಯಾರೇ ಬಂದು ಹೋದರು ನಮ್ಮ ಜೆಡಿಎಸ್ ಶಕ್ತಿ ಕುಗ್ಗಿಸಲು ಅಸಾಧ್ಯವೆಂದು ಶಾಸಕ ಕೆ.ಎಸ್ ಲಿಂಗೇಶ್ ಹೇಳಿದರು.

ವಿಧಾನಸಭಾ ಚುನಾವಣೆಯ ಹಿನ್ನೆಲೆ ಜೆಡಿಎಸ್ ವತಿಯಿಂದ ಬೇಲೂರು ಪುರಸಭೆ ವ್ಯಾಪ್ತಿಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಈ ದೇಶಕ್ಕೆ ಎಚ್.ಡಿ ದೇವೇಗೌಡರು ಪ್ರಧಾನಿಯಾಗಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಲ್ಪಾವಧಿಯಲ್ಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಜಿಲ್ಲೆಗೆ ಅಲ್ಲದೆ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಅದರಂತೆ ಮೋದಿ ಬಗ್ಗೆ ಗೌರವವಿದೆ. ಜಿಲ್ಲೆಗೆ ಯಾರೇ ಬಂದು ಹೋಗಲಿ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಅವರ ಶಕ್ತಿಯನ್ನು ಕುಗ್ಗಿಸಲು ಅಸಾಧ್ಯ” ಎಂದರು.

“ಮೋದಿ ಜಿಲ್ಲೆಗೆ ಬಂದಾಕ್ಷಣ ಬೇಲೂರು ಬಿಜೆಪಿ ಪಾಲಾಗುತ್ತದೆ ಎನ್ನುವುದು ಅವರ ಭ್ರಮೆ. ಮೋದಿ ಭಾಷಣ ಏನಿದ್ದರೂ ಕೇಂದ್ರಕ್ಕೆ ಸೀಮಿತ. ಇಲ್ಲಿ ಕುಮಾರಸ್ವಾಮಿ, ರೇವಣ್ಣ ಅವರೇ ನಾಯಕರು. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಅಧಿಕಾರ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಪಂಚರತ್ನ ಯಾತ್ರೆಯಿಂದ ರಾಜ್ಯದ ಜನತೆಗೆ ಅನುಕೂಲವಾಗುತ್ತದೆ. ನೀರಾವರಿ, ಶಿಕ್ಷಣ, ಕೃಷಿ, ಆರೋಗ್ಯ ಸೇರಿದಂತೆ  ಜನಸಾಮಾನ್ಯರಿಗೆ ಅವಶ್ಯಕತೆ ಇರುವ ಹಲವಾರು ಯೋಜನೆಗಳನ್ನು ಕುಮಾರಣ್ಣ ಗಮನದಲ್ಲಿಟ್ಟುಕೊಂಡಿದ್ದಾರೆ. ಅವುಗಳನ್ನು ಜಾರಿಗೆ ತರಲು ಜೆಡಿಎಸ್ ಬೆಂಬಲಿಸಬೇಕು” ಎಂದು ಮನವಿ ಮಾಡಿದರು.

Advertisements

“ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ನನ್ನನ್ನು ಮತ್ತೊಮ್ಮೆ ಶಾಸಕನಾಗಲು ನಿಮ್ಮ ಸಹಕಾರ, ಬೆಂಬಲ ಅಗತ್ಯ, ಬೇಲೂರು ತಾಲೂಕನ್ನು ಇನ್ನೂ ಅಭಿವೃದ್ಧಿಪಡಿಸಬೇಕಿದೆ. ಹಾಗಾಗಿ ಮತ್ತೊಮ್ಮೆ ಅವಕಾಶ ಕೋರುತ್ತಿದ್ದೇನೆ. ಅಲ್ಲದೆ ನಾನು ಸ್ಥಳೀಯ ಅಭ್ಯರ್ಥಿ, ಬೇಲೂರಿನವನು ನಿಮ್ಮ ಮನೆಮಗನಾದ ನನ್ನನ್ನು ಆಶೀರ್ವದಿಸಿ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

“ಜೆಡಿಎಸ್ ಅಧಿಕಾರಕ್ಕೆ ಬಂದರೆ ಇಡೀ ಜಿಲ್ಲೆ ಅಲ್ಲದೆ ರಾಜ್ಯದ ಅಭಿವೃದ್ಧಿ ಸಾಧ್ಯ. ಕುಮಾರಸ್ವಾಮಿ ಅಲ್ಪ ಅವಧಿಯಲ್ಲಿ ಆಡಳಿತ ನಡೆಸಿದರೂ ರಾಜ್ಯದ ಜನತೆ ಮೆಚ್ಚುವ ಕೆಲಸ ಮಾಡಿದ್ದಾರೆ. ನೀವು ಕಾಂಗ್ರೆಸ್ಸಿಗೆ ವೋಟ್ ಹಾಕಿದರೆ ಬಿಜೆಪಿಗೆ ಹಾಕಿದಂತೆ ಇದನ್ನು ಯಾರು ಮರೆಯಬಾರದು” ಎಂದು  ಪುರಸಭೆ ಮಾಜಿ ಅಧ್ಯಕ್ಷ ತಜ್ಜಮುಲ್ಲಪಾರ ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಟಿ.ಎ. ಶ್ರೀನಿಧಿ, ಸದಸ್ಯ ಜಗದೀಶ್, ನಗರ ಪ್ರಧಾನ ಕಾರ್ಯದರ್ಶಿ ಖಾದರ್, ಸುರೇಶ್, ಮಂಜುನಾಥ್, ಅಸ್ಲಾಂಪಾಷ, ಆರೀಫ್, ನವೀದ್, ಜಮೀಲ್ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X