ತೀರ್ಥಹಳ್ಳಿ | ಪಟ್ಟಣ ಪಂ. ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ರಹ್ಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ

Date:

Advertisements

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ರಹ್ಮತುಲ್ಲಾ ಅಸಾದಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹಿರಿಯ ಸದಸ್ಯೆ ಗೀತಾ ರಮೇಶ್ ರವರು ಆಯ್ಕೆಯಾಗಿದ್ದಾರೆ.

ವಿಶೇಷ ಅಂದರೆ, ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ, ಉಪಾಧ್ಯಕ್ಷರಾಗಿದ್ದ ರಹ್ಮತುಲ್ಲಾ ಅಸಾದಿ ಅಧ್ಯಕ್ಷರಾಗಿದ್ದಾರೆ.

ತೀರ್ಥಹಳ್ಳಿ 1

ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್ ನಾಮಪತ್ರ ಸಲ್ಲಿಸಿದ್ದರು. ಒಟ್ಟು 15 ಸ್ಥಾನವಿರುವ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 6 ಸ್ಥಾನ ಪಡೆದಿತ್ತು. ಕಾಂಗ್ರೆಸ್‌ 8 ಸ್ಥಾನ ಪಡೆದಿತ್ತು. ಓರ್ವರು ಸ್ವತಂತ್ರ ಅಭ್ಯರ್ಥಿಯಾಗಿದ್ದರು. ಈ ನಡುವೆ ಬಿಜೆಪಿಯ ಸಂಸದ, ಶಾಸಕರು ಸೇರಿ ಬಿಜೆಪಿಯ ಬಲಾಬಲ 8 ಆಗುತ್ತಿತ್ತು. ಆದಾಗ್ಯೂ, ಲೆಕ್ಕಾಚಾರದ ಗೆಲುವಿನಲ್ಲಿ ಕಾಂಗ್ರೆಸ್‌ ಮ್ಯಾಜಿಕ್‌ ನಂಬರ್‌ ಸಾಧಿಸಿದೆ. ಆ ಮೂಲಕ ಇಂದು ನಡೆದ ಚುನಾವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್‌ ಪಟ್ಟಣ ಪಂಚಾಯಿತಿಯನ್ನು ತನ್ನದಾಗಿಸಿಕೊಂಡಿದೆ.

Advertisements

ವರದಿ: ಲಿಯೋ ಅರೋಜ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X