ರಾಮನಗರ| ಪಿಓಪಿ ಗೌರಿ-ಗಣೇಶ ಮೂರ್ತಿಗಳನ್ನು ನಿಷೇಧಿಸಿ : ಪ್ರಶಾಂತ್ ಹೊಸದುರ್ಗ ಒತ್ತಾಯ

Date:

Advertisements

ಗೌರಿ-ಗಣೇಶ ಮೂರ್ತಿಗಳನ್ನು ಕೂರಿಸುವುದು ಹಿಂದೂಗಳಲ್ಲಿ ರೂಢಿಗತವಾಗಿ ನಡೆದು ಬಂದಿದೆ. ಪಿಓಪಿಯಿಂದ ಮಾಡಿದ ಮೂರ್ತಿಯನ್ನು ಕೂರಿಸುವುದು ಪರಿಸರಕ್ಕೆ ಮಾರಕ. ಪರಿಸರ ಇಲಾಖೆ ಬೀದಿಗಿಳಿದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೆಆರ್‌ಎಸ್ ಪಕ್ಷದ ಪ್ರಶಾಂತ್ ಹೊಸದುರ್ಗ ಒತ್ತಾಯಿಸಿದರು.

ರಾಮನಗರ ಜಿಲ್ಲಾ ಪರಿಸರ ಅಧಿಕಾರಿ ಸಿ.ಆರ್.ಮಂಜುನಾಥ್‌ಗೆ ಮಂಗಳವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ತಡೆಯಿಲ್ಲದೆ ನಿಷೇಧಿತ ಪಿಓಪಿ ಗಣೇಶ ಮೂರ್ತಿ ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಅನಧಿಕೃತ ಮೂರ್ತಿಯ ಮಾರಾಟವನ್ನು ತಡೆಗಟ್ಟಬೇಕು ಎಂದು ಮನವಿ ಮಾಡಿದರು.

ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿದ ಹಾಗೂ ರಾಸಾಯನಿಕ ಬಣ್ಣಗಳನ್ನು ಹಚ್ಚಿದ ಗೌರಿ-ಗಣೇಶ ಮೂರ್ತಿಗಳು ಪರಿಸರಕ್ಕೆ ಮಾರಕ. ಇವುಗಳನ್ನು ಕೆರೆ ಕಟ್ಟೆಗಳಲ್ಲಿ ಬಿಡುವುದು ಚಲಚರಗಳ ಮೇಲೆ ಪರಿಣಾಮ ಬೀರಲಿದೆ. ಮಾರಾಟಗಾರರ ಮೇಲೆ ಕ್ರಮ ಕೈಗೊಂಡು ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡಲು ಅನುವು ಮಾಡಬೇಕು ಎಂದು ಆಗ್ರಹಿಸಿದರು.

Advertisements

ಸ್ಥಳೀಯ ಆಡಳಿತಗಳಿಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ಕೂರಿಸಲು ಮತ್ತು ವಿಸರ್ಜಿಸಲು ಅನುಮತಿ ನೀಡಬೇಕು. ಅನಧಿಕೃತ ಪಿಓಪಿ ಮೂರ್ತಿಯನ್ನು ಕೂರಿಸುವ ಆಯೋಜಕರ ಎದುರು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಬೇಕೆಂದು ಒತ್ತಾಯಿಸಿದರು.

ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಜಿಲ್ಲಾ ಪರಿಸರ ಅಧಿಕಾರಿ ಸಿ ಆರ್ ಮಂಜುನಾಥ್, ನಾವು ಪರಿಸರಕ್ಕೆ ಮಾರಕವಾದ ನಿಷೇಧಿತ ವಸ್ತುಗಳಿಂದ ತಯಾರಿಸಿದ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ಕೂರಿಸಲು ಹಾಗೂ ವಿಸರ್ಜಿಸಲು ಉತ್ತೇಜನ ನೀಡುವುದಿಲ್ಲ. ಇದರ ಬಗ್ಗೆ ನಗರಸಭೆಯ ಕಸ ಎತ್ತುವ ವಾಹನಗಳಲ್ಲಿ ಜಾಗೃತಿ ಪ್ರಚಾರ ಮಾಡಲಾಗುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸದಾ ಜಾತಿಯ ಕುರಿತೇ ಚರ್ಚಿಸುವುದರಲ್ಲಿ ಒಂದು ಅಪಾಯವಿದೆ | thangalaan

ಯಾವುದೇ ಸ್ಥಳಗಳಲ್ಲಿ ಈ ನಿಷೇಧಿತ ಮೂರ್ತಿಗಳ ತಯಾರಿಕೆ, ಮಾರಾಟ ಹಾಗೂ ಕೂರಿಸಿರುವುದು ಕಂಡು ಬಂದರೆ ಸಾರ್ವಜನಿಕರು ನನ್ನ ಮೊಬೈಲ್ ಸಂಖ್ಯೆ 9845367378 ಕ್ಕೆ ಕರೆ ಮಾಡಿ ತಿಳಿಸಿದರೆ, ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X