ರಾಯಚೂರು | ಕೃಷಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸ್ಥಳಾಂತರ ರದ್ದುಪಡಿಸಿ : ರಮೇಶ್‌ ವೀರಾಪುರ ಆಗ್ರಹ

Date:

Advertisements

ಲಿಂಗಸುಗೂರು ಕೃಷಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಲಿಂಗಸುಗೂರು ತಾಲೂಕಿನಿಂದ ಸಿಂಧನೂರಿಗೆ ಸ್ಥಳಾಂತರಿಸಲು ಹೊರಡಿಸಲಾದ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಎಸ್ಎಫ್ಐ ಮುಖಂಡ ರಮೇಶ್ ವೀರಾಪುರ ಆಗ್ರಹಿಸಿದ್ದಾರೆ.

ಈ ದಿನ.ಕಾಮ್‌ ಜೊತೆ ಮಾತನಾಡಿದ ಅವರು, ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ ರವರು ಸ್ಥಳಾಂತರಿಸಲು ಆದೇಶ ಹೊರಡಿಸಿರುವುದು ದುರಂತ. ಈ ಭಾಗದ ರೈತರಿಗೆ ಅಧಿಕಾರಿಗಳು ಫಸಲು ತಿನ್ನಿಸುವ ಬದಲು ಮಣ್ಣು ಮುಕ್ಕಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

“ಕೃಷಿ ಉಪನಿರ್ದೇಶರ ಕಚೇರಿ ಸ್ಥಳಾಂತರವಾದರೆ ಈ ಭಾಗದ ರೈತರು ಸಮಸ್ಯೆಗಳ ಸುರಿಮಳೆಯನ್ನು ಎದುರಿಸಬೇಕಾಗುತ್ತದೆ. ಲಿಂಗಸುಗೂರು ತಾಲೂಕಿನಿಂದ ಸುಮಾರು 70 ಕಿಲೋ ಮೀಟರ್ ದೂರದಲ್ಲಿರುವ ಸಿಂಧನೂರಿಗೆ ರೈತರು ಪ್ರಯಾಣಿಸಬೇಕಾಗುತ್ತದೆ. ಇದಕ್ಕೆ 500 ರೂಪಾಯಿಯಿಂದ 1000 ರೂಪಾಯಿವರಗೆ ಖರ್ಚು ತಗಲುತ್ತದೆ. ಅಲ್ಲದೇ, ಇಡೀ ದಿನ ಇದಕ್ಕೆಂದೇ ಮೀಸಲಿಡಬೇಕಾಗುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

Advertisements

ಈಗಾಗಲೇ ತಾಲೂಕಿನ ಮಂಜೂರಾತಿ ಹಂತದಲ್ಲಿದ್ದ ಪ್ರಾದೇಶಿಕ ಸಾರಿಗೆ ಕಚೇರಿ, ಜಿಲ್ಲಾ ನ್ಯಾಯಾಲಯ ಹಾಗೂ ಕೆಪಿಟಿಸಿಎಲ್ ಕಚೇರಿಗಳು ಸಿಂಧನೂರಿಗೆ ಸ್ಥಳಾಂತರವಾಗಿವೆ. ಒಂದೊಂದಾಗಿ ಕಚೇರಿಯನ್ನು ಸ್ಥಳಾಂತರಕ್ಕೆ ಕೈ ಹಾಕುತ್ತಿರುವುದು ವಿಪರ್ಯಾಸ. ಕೃಷಿ ಇಲಾಖೆ ಕೂಡ ಸ್ಥಳಾಂತರಗೊಳ್ಳುತ್ತಿರುವುದು ತುಂಬಾ ಬೇಸರದ ಸಂಗತಿ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು!

ಲಿಂಗಸುಗೂರು ಕ್ಷೇತ್ರ ದಿವಾಳಿಯತ್ತ ಸಾಗಿದೆ. ಜನಪ್ರತಿನಿಧಿಗಳು ತಾಲೂಕಿನ ಕಚೇರಿಗಳು ಸ್ಥಳಾಂತರವಾಗುತ್ತಿರುವುದಕ್ಕೂ ತಮಗೂ ಯಾವ ಸಂಬಂಧವಿಲ್ಲದಂತೆ ಬೆಂಗಳೂರು, ದಿಲ್ಲಿ ಸುತ್ತುತ್ತಿದ್ದಾರೆ. ಕಷ್ಟಕ್ಕೆ ಕರಿಬೇಡ, ಊಟಕ್ಕೆ ಮರಿಬೇಡ ಎನ್ನುವಂತೆ ಲಿಂಗಸುಗೂರು ಕ್ಷೇತ್ರದ ಶಾಸಕರು ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೃಷಿ ಉಪ ನಿರ್ದೇಶಕರು 2 ಕಚೇರಿ ಸ್ಥಳಾಂತರವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X