ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಬ್ಬಂದಿಯ ಬರ್ಬರ ಹತ್ಯೆ

Date:

Advertisements

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

45 ವರ್ಷದ ರಾಮಕೃಷ್ಣ ಎಂಬುವವರು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

ರಾಮಕೃಷ್ಣ ಅವರಿಗೆ ತುಮಕೂರಿನ ಮಧುಗಿರಿ ನಿವಾಸಿ ರಮೇಶ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧಯಿದೆ ಎಂದು ಶಂಕಿಸಿ ಈ ಕೊಲೆಯನ್ನು ಮಾಡಲಾಗಿದೆ.

Advertisements
ಬೆಂಗಳೂರು ವಿಮಾನ ನಿಲ್ದಾಣ

ಇದನ್ನು ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಆನೇಕಲ್‌ ಪುರಸಭಾ ಸದಸ್ಯನ ಬರ್ಬರ ಹತ್ಯೆ

ರಾಮಕೃಷ್ಣ ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದರು. ಬುಧವಾರ ತಡರಾತ್ರಿ ಬಿಎಂಟಿಸಿ ಬಸ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಬಂದ ರಮೇಶ್, ರಾಮಕೃಷ್ಣ ಜೊತೆ ಜಗಳ ಮಾಡಿದ್ದು, ಬಳಿಕ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ರಾಮಕೃಷ್ಣ ಸಾವನ್ನಪ್ಪಿದ್ದಾರೆ.

ಪೊಲೀಸರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿ ರಮೇಶ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X