ರಾಯಚೂರು | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ ಅನುಮತಿ ಹಿಂಪಡೆಗೆ ಆಗ್ರಹ

Date:

Advertisements

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼತಳಸಮುದಾಯ ಓರ್ವ ನಾಯಕ ಸಿದ್ದರಾಮಯ್ಯನವರು ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಜನಪರ ಸರ್ಕಾರ ನೀಡುವುದನ್ನು ಸಹಿಸದ ಬಿಜೆಪಿ-ಜೆಡಿಎಸ್‌ ಪಕ್ಷಗಳು ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿವೆʼ ಎಂದು ಆರೋಪಿಸಿದರು .

ʼಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಳೆದ 15 ತಿಂಗಳಲ್ಲಿ ಜನರ ಬದುಕಿನ ಒಮ್ಮೆಯೂ ಧ್ವನಿ ಎತ್ತಲಿಲ್ಲ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಇನ್ನಿಲ್ಲದ ಷಡ್ಯಂತ್ರ ಹೂಡುವುದೇ ಬಿಜೆಪಿಯ ನಿತ್ಯದ ಕಾಯಕವಾಗಿದೆʼ ಎಂದರು .

Advertisements

ʼಸಿಬಿಐ, ಇಡಿ, ಐಟಿಗಳಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುವುದು, ಅಪರೇಷನ್ ಕಮಲ ಮೂಲಕ ಸರ್ಕಾರಗಳು ಕೆಡವು ಪ್ರಯತ್ನ ಇನ್ನು ಮುಂದುವರೆದಿದೆ. ರಾಜ್ಯದ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರ ಅನುಮತಿ ತಿರಸ್ಕರಿಸಿ ನ್ಯಾಯಾಲಯ ರಾಜಕೀಯ ಶಕ್ತಿಗಳಿಗೆ ಹೊಸ ಸಂದೇಶ ರವಾನಿಸಿ ಸಂವಿಧಾನಿಕ ಘನತೆ ಎತ್ತಿ ಹಿಡಿಯಬೇಕುʼ ಎಂದು ಹೇಳಿದರು.

ಪ್ರಗತಿಪರ ಹೋರಾಟಗಾರ ಖಾಜಾ ಅಸ್ಲಾಂ ಪಾಶಾ, ಎಂ.ಆರ್. ಭೇರಿ, ಸಮದ್, ರಂಗಾರೆಡ್ಡಿ ಹಾಗೂ ಕರ್ನಾಟಕ ಜನಶಕ್ತಿ ಮುಖಂಡ ಆಂಜನೇಯ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X