ಮಧ್ಯಪ್ರದೇಶ | ದಲಿತ ಮಹಿಳೆ, ಮೊಮ್ಮಗನಿಗೆ ಅಮಾನುಷವಾಗಿ ಥಳಿಸಿದ ಪೊಲೀಸರು; ವಿಡಿಯೋ ವೈರಲ್

Date:

Advertisements

ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದಲಿತ ಮಹಿಳೆ ಮತ್ತು 15 ವರ್ಷದ ಮೊಮ್ಮಗನಿಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಒಬ್ಬ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಘಟನೆಯ ತನಿಖೆಗೆ ಆದೇಶಿಸಲಾಗಿದೆ. ಈ ವಿಡಿಯೋ 2023ರ ಅಕ್ಟೋಬರ್‌ನಲ್ಲಿ ನಡೆದ ಘಟನೆಯದ್ದು ಎಂದು ಹೇಳಲಾಗಿದೆ.

ಜಬಲ್‌ಪುರದ ಕಟ್ನಿ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ನಿಲ್ದಾಣದ ಉಸ್ತುವಾರಿ ಅಧಿಕಾರಿ ಅರುಣಾ ವಗಾನೆ, ದಲಿತ ಮಹಿಳೆ ಕುಸುಮ್ ವಂಸ್ಕರ್‌ಗೆ ಕೋಲಿನಿಂದ ಹೊಡೆಯುವುದು ವಿಡಿಯೋದಲ್ಲಿ ನೋಡಬಹುದು. ಮಹಿಳೆಗೆ ಹೊಡೆದು ನಂತರ ಪ್ರಶ್ನಿಸಿದ ಆಕೆಯ ಮೊಮ್ಮಗನಿಗೂ ಥಳಿಸಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡು ಬಂದಿದೆ.

Advertisements

ಇದನ್ನು ಓದಿದ್ದೀರಾ? ಬೆಳಗಾವಿ | ಕ್ಷೌರ ವಿಚಾರಕ್ಕೆ ಕೊಲೆ: ದಲಿತ ಯುವಕನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಲು ಸಿಪಿಐಎಂ ಆಗ್ರಹ

ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶದ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕರು ಗುರಿಯಾಗಿಸಿದ್ದಾರೆ. ಈ ಘಟನೆಯು ‘ದಲಿತರ ಮೇಲಿನ ದಬ್ಬಾಳಿಕೆ’ಗೆ ಉದಾಹರಣೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ವಿಡಿಯೋ ಹಂಚಿಕೊಂಡಿದ್ದು, “ದಲಿತರ ದಬ್ಬಾಳಿಕೆಯು ಬಿಜೆಪಿಯ ದೊಡ್ಡ ಅಸ್ತ್ರವಾಗಿದೆ” ಎಂದು ಆರೋಪಿಸಿದ್ದಾರೆ. ಜೊತೆಗೆ, “ರಾಜಕೀಯ ದುರುದ್ದೇಶದ ಈ ಆಟ ನಿಲ್ಲಬೇಕು” ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X