ಐಪಿಎಲ್‌ 2023 | ಹೈದರಾಬಾದ್‌ ತಂಡಕ್ಕೆ ಮೂರನೇ ಗೆಲುವಿನ ಸಂಭ್ರಮ

Date:

Advertisements

ಐಪಿಎಲ್‌ 16ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಮೂರನೇ ಗೆಲುವಿನ ಸಂಭ್ರಮವನ್ನಾಚರಿಸಿದೆ.

ದೆಹಲಿಯ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಸ್‌ಆರ್‌ಎಚ್‌, ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 9 ರನ್‌ಗಳ ಅಂತರದಲ್ಲಿ ಮಣಿಸಿತು.

197 ರನ್‌ ಚೇಸಿಂಗ್‌ ವೇಳೆ ಒಂದು ಹಂತದಲ್ಲಿ ಡೆಲ್ಲಿ 11 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟದಲ್ಲಿ 111 ರನ್‌ಗಳಿಸುವ ಮೂಲಕ ಗೆಲುವಿನತ್ತ ಮುನ್ನಡೆದಿತ್ತು. ನಾಯಕ ವಾರ್ನರ್‌ ಖಾತೆ ತೆರೆಯುವ ಮುನ್ನವೇ ವಿಕೆಟ್‌ ಒಪ್ಪಿಸಿದರೂ ಸಹ, ಫಿಲ್‌ ಸಾಲ್ಟ್‌ ಮತ್ತು ಮಿಚೆಲ್‌ ಮಾರ್ಶ್‌ ಶತಕದ ಜೊತೆಯಾಟದಲ್ಲಿ ಭಾಗಿಯಾದರು.

Advertisements

ಸಾಲ್ಟ್‌ 59 (35 ಎಸೆತ, 4×9) ಮತ್ತು ಮಾರ್ಶ್‌ 63 ರನ್‌ (39 ಎಸೆತ 4×1 6×6) ವಿಕೆಟ್‌ ಪತನವಾಗುತ್ತಲೇ ಡೆಲ್ಲಿ ಕುಸಿತ ಆರಂಭವಾಗಿತ್ತು. ಕೊನೆಯಲ್ಲಿ ಎಂದಿನಂತೆ ಅಕ್ಷರ್‌ ಪಟೇಲ್‌ ಬಿರುಸಿನ ಬ್ಯಾಟಿಂಗ್‌ (29 ರನ್‌ 14 ಎಸೆತ) ನಡೆಸಿದರಾದರೂ ತಂಡವನ್ನು ಸೋಲಿನಂಚಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಈ ಸೋಲಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಈ ಬಾರಿಯ ಫ್ಲೇಆಫ್​ ಹಾದಿ ಇನ್ನಷ್ಟು ಕಠಿಣವಾಗಿದೆ. 8 ಪಂದ್ಯಗಳನ್ನಾಡಿರುವ ಡೆಲ್ಲಿ, ಕೇವಲ 2 ಗೆಲುವು ಕಂಡಿದ್ದು, 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಈ ಸುದ್ದಿ ಓದಿದ್ದೀರಾ?: ರಾಯಲ್ಸ್‌ ಎದುರು ನಡೆಯದ ಕಿಂಗ್ಸ್‌ ಆಟ; ಮತ್ತೆ ಸೋತ ಚೆನ್ನೈ

ಬೌಲಿಂಗ್‌ನಲ್ಲೂ ಮಿಂಚಿದ್ದ ಮಿಚೆಲ್‌ ಮಾರ್ಶ್‌, 4 ಓವರ್‌ಗಳಲ್ಲಿ 27 ರನ್‌ ನೀಡಿ 4 ವಿಕೆಟ್‌ ಪಡೆದಿದ್ದರು. ಅದರಲ್ಲೂ 1 ಓವರ್‌ ಮೇಡನ್‌ ಆಗಿತ್ತು ಎಂಬುದು ವಿಶೇಷ. ಅರ್ಹವಾಗಿಯೇ ಮಾರ್ಶ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದಕ್ಕೂ ಮೊದಲು ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌, ಆರಂಭಿಕ ಅಭಿಶೇಕ್‌ ಶರ್ಮಾ ಮತ್ತು ಹೆನ್ರಿಕ್‌ ಕ್ಲಾಸೆನ್‌ ಗಳಿಸಿದ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ ನಷ್ಟದಲ್ಲಿ 196 ರನ್‌ಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X