ಪರಿಶಿಷ್ಟರ ಮೀಸಲು ಹೆಚ್ಚಳ ಪ್ರಸ್ತಾವ | ಸಮುದಾಯಗಳ ಭಾವನೆ ಜೊತೆ ಬಿಜೆಪಿ ಆಟ ಆಡುತ್ತಿದೆ: ಜೆಡಿಎಸ್‌

Date:

Advertisements
  • ಮೀಸಲು ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧ ಎಂದ ಸಿಎಂ ಬೊಮ್ಮಾಯಿ
  • ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಕಿಡಿ

ಬಿಜೆಪಿ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಕುರಿತು ಅವರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಕುರಿತು ರಾಜ್ಯ ಸರ್ಕಾರ ಬಡಾಯಿ ಕೊಚ್ಚಿಕೊಂಡಿತ್ತು. ಆದರೆ, ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರಿಸಿದ್ದ ಕೇಂದ್ರ ಸರ್ಕಾರ, “ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಕುರಿತು ಕರ್ನಾಟಕ ಸರ್ಕಾರ ಯಾವುದೇ ಪ್ರಸ್ತಾವ ಸಲ್ಲಿಸಿಲ್ಲ” ಎಂದು ಹೇಳಿತ್ತು.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದರು. ಇದೀಗ ಜೆಡಿಎಸ್‌ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

Advertisements

“ಸುಳ್ಳಿನ ಬುರುಡೆ ಬಿಡುವುದನ್ನೇ ಕರಗತ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಗಳ ಹಣೆಗೆ ತುಪ್ಪ ಹಚ್ಚಿದ್ದಾಯ್ತು. ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಸಂಬಂಧ ಕೇಂದ್ರಕ್ಕೆ ಯಾವುದೇ ಪ್ರಸ್ತಾವವನ್ನೂ ಕಳಿಸದೇ, ಅವರಿಗೂ ಮೋಸ ಮಾಡುತ್ತಿದೆ” ಎಂದು ಟೀಕಿಸಿದೆ.

“ಸುಳ್ಳು ಹೇಳುವ ಮೂಲಕ ಎಲ್ಲ ಸಮುದಾಯಗಳನ್ನು ಭ್ರಮೆಯಲ್ಲಿ ತೇಲಿಸಬಹುದು ಎಂದು ರಾಜ್ಯ ಸರ್ಕಾರ ಭಾವಿಸಿದಂತಿದೆ” ಎಂದು ವ್ಯಂಗ್ಯವಾಡಿದೆ.

“ಮೀಸಲು ಹೆಚ್ಚಳದ ನಿರ್ಣಯವನ್ನು ಸಂವಿಧಾನದ 9ನೇ ವಿಧಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ಇನ್ನೂ ಮೀನಾ-ಮೇಷ ಎಣಿಸುತ್ತಿರುವುದು ಏಕೆ? ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿತ್ತಲ್ಲವೆ? ಸಮುದಾಯಗಳ ಭಾವನೆಗಳ ಜತೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ” ಎಂದು ಜೆಡಿಎಸ್‌ ಪ್ರಶ್ನಿಸಿದೆ.

ರಣದೀಪ್‌ ಸುರ್ಜೇವಾಲ ಅವರಿಗೆ ಸಿಎಂ ತಿರುಗೇಟು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಯಾವುದೇ ಪ್ರಸ್ತಾವ ಸಲ್ಲಿಸದ ಕುರಿತು ಪ್ರತಿಕ್ರಿಯೆ ನೀಡಿದ್ದ ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಇದೀಗ ಸುರ್ಜೇವಾಲ ಹೇಳಿಕೆಗೆ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಗೃಹ ಕಚೇರಿಯ ಹೊರಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, “ಮೀಸಲಾತಿ ಬಗ್ಗೆ ಮಾತನಾಡುವ ನೈತಿಕತೆ ಮತ್ತು ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ” ಎಂದು ಹೇಳಿದರು.

ಶೆಡ್ಯೂಲ್ 9ಕ್ಕೆ ಸೇರಿಸಲು ಸೂಚನೆ

“ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ” ಎಂದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X