ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

Advertisements

ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್‌ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ ಇಲಾಖೆಯು ತಿಳಿಸಿದೆ.

1976ರ ಬಳಿಕ ಮೊದಲ ಬಾರಿಗೆ 2024ರ ಆಗಸ್ಟ್‌ನಲ್ಲಿ ಅರಬ್ಬಿ ಸಮುದ್ರದ ಮೇಲೆ ಕಾಣಿಸಿಕೊಳ್ಳುವ ಮೊದಲ ಚಂಡಮಾರುತ ಇದಾಗಿದ್ದು, ಪಾಕಿಸ್ತಾನದ ಪ್ರಸ್ತಾಪದಂತೆ ಈ ಚಂಡಮಾರುತಕ್ಕೆ ‘ಸೈಕ್ಲೋನ್ ಅಸ್ನಾ’ ಎಂದು ಹೆಸರಿಡುವ ಸಾಧ್ಯತೆಯಿದೆ.

ಕರಾವಳಿಯಲ್ಲಿರುವ ಎಲ್ಲ ರಾಜ್ಯಗಳಲ್ಲಿಯೂ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಈಗಾಗಲೇ ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

Advertisements

ಇದನ್ನು ಓದಿದ್ದೀರಾ? ಗುಜರಾತ್ ಪ್ರವಾಹ | 15ಕ್ಕೂ ಅಧಿಕ ಸಾವು: ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚಂಡಮಾರುತವು ಹೆಚ್ಚಾಗಿ ಗುಜರಾತ್‌ನ ಜಾಮ್‌ನಗರ, ಪೋರಬಂದರ್ ಮತ್ತು ದ್ವಾರಕಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಭಾವ ಬೀರುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಗುಜರಾತ್‌ನ ಚಂಡಮಾರುತಕ್ಕೆ ತುತ್ತಾಗುವ ಆತಂಕ ಎದುರಾಗಿರುವಾಗ, ಈಗಾಗಲೇ ಭಾರೀ ಮಳೆಯಿಂದಾಗಿ ಗುಜರಾತ್‌ನಲ್ಲಿ ಹಲವಾರು ದುರಂತಗಳು ನಡೆದಿದೆ. ಭಾರೀ ಮಳೆಯಿಂದಾಗಿ ನಡೆದ ಅವಘಡಗಳಿಂದಾಗಿ ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಒಟ್ಟಾಗಿ 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X