ಮುಸ್ಲಿಂ ಶಾಸಕರಿಗಿದ್ದ ಶುಕ್ರವಾರದ ನಮಾಜ್ ವಿರಾಮ ರದ್ದುಗೊಳಿಸಿದ ಅಸ್ಸಾಂ ಸರ್ಕಾರ

Date:

Advertisements

ಅಸ್ಸಾಂ ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರಿಗಿದ್ದ ಎರಡು ಗಂಟೆಗಳ ನಮಾಜ್ ವಿರಾಮ ರದ್ದುಗೊಳಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ. ಇದು ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ವಸಾಹತುಶಾಹಿ ಯುಗದ ಅಭ್ಯಾಸಗಳನ್ನು ತ್ಯಜಿಸುವ ಒಂದು ಹೆಜ್ಜೆ ಎಂದು ಸರ್ಕಾರ ಹೇಳಿಕೊಂಡಿದೆ.

ಮುಸ್ಲಿಂ ಶಾಸಕರು ಮತ್ತು ಸಿಬ್ಬಂದಿ ಸದಸ್ಯರಿಗೆ ಶುಕ್ರವಾರದ ಪ್ರಾರ್ಥನೆ ಅಥವಾ ನಮಾಜ್‌ಗಾಗಿ ಅಸ್ಸಾಂನಲ್ಲಿ ಈ ಹಿಂದೆ ಎರಡು ಗಂಟೆಗಳ ಕಾಲ ವಿರಾಮವನ್ನು ನೀಡಲಾಗುತ್ತಿತ್ತು. ಆದರೆ ಈ ದೀರ್ಘಕಾಲದ ನಿಬಂಧನೆಯನ್ನು ಶುಕ್ರವಾರವೇ ಅಸ್ಸಾಂ ಸರ್ಕಾರ ತೆಗೆದುಹಾಕಿದೆ.

ಈ ನಿರ್ಧಾರವನ್ನು ಬೆಂಬಲಿಸಿದ ವಿಧಾನಸಭೆ ಸ್ಪೀಕರ್ ಬಿಸ್ವಜಿತ್ ಡೈಮರಿ ಮತ್ತು ಶಾಸಕರಿಗೆ ಮುಖ್ಯಮಂತ್ರಿ ಶರ್ಮಾ ಕೃತಜ್ಞತೆ ಸಲ್ಲಿಸಿದರು. ಜುಮ್ಮಾ ವಿರಾಮವನ್ನು ರದ್ದುಪಡಿಸುವ ಮೂಲಕ, ಶಾಸಕಾಂಗ ಉತ್ಪಾದಕತೆಗೆ ಆದ್ಯತೆ ನೀಡುತ್ತಿದ್ದಾರೆ ಎಂದು ಒತ್ತಿ ಹೇಳಿದರು.

Advertisements

ಇದನ್ನು ಓದಿದ್ದೀರಾ? ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಹಿಮಂತ ಬಿಸ್ವಾ ಶರ್ಮಾ, “2 ಗಂಟೆಗಳ ಜುಮ್ಮಾ ವಿರಾಮವನ್ನು ತೆಗೆದುಹಾಕುವ ಮೂಲಕ, ಅಸ್ಸಾಂ ಅಸೆಂಬ್ಲಿಯು ಉತ್ಪಾದಕತೆಗೆ ಆದ್ಯತೆ ನೀಡಿದೆ. ವಸಾಹತುಶಾಹಿ ಪದ್ಧತಿಯನ್ನು ಕೊನೆ ಮಾಡಿದೆ. ಯಾವುದೇ ಧಾರ್ಮಿಕ ವಿಚಾರಗಳಿಲ್ಲದೆ ವಿಧಾನಸಭೆ ಕಾರ್ಯ ನಿರ್ವಹಿಸಬೇಕು” ಎಂದಿದ್ದಾರೆ.

ಎಲ್ಲಾ ಅಸೆಂಬ್ಲಿ ಸದಸ್ಯರು ಮಾಡಿದ ಸರ್ವಾನುಮತದ ನಿರ್ಧಾರದ ಭಾಗವಾಗಿ ಅಸ್ಸಾಂ ವಿಧಾನಸಭೆಯಲ್ಲಿ ನಮಾಜ್ ವಿರಾಮವನ್ನು ರದ್ದುಗೊಳಿಸಲಾಗಿದೆ. ಶುಕ್ರವಾರದಂದು ಮಧ್ಯಾಹ್ನ 12:00 ರಿಂದ 2:00ರವರೆಗೆ ಎರಡು ಗಂಟೆಗಳ ವಿರಾಮ ನೀಡಲಾಗುತ್ತಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X