ಬಳ್ಳಾರಿ | ಜಿಂದಾಲ್‌ಗೆ ನೀಡುವ ಜಮೀನು ರೈತರಿಗೆ ವಾಪಸ್ ನೀಡಿ : ಆರ್‌ಪಿಐ ಆಗ್ರಹ

Date:

Advertisements

ರಾಜ್ಯ ಕಾಂಗ್ರೆಸ್ ಸರ್ಕಾರ ಜಿಂದಾಲ್‌ ಕಂಪನಿಗೆ ಕಡಿಮೆ ಬೆಲೆಗೆ ಭೂಮಿ ಮಾರಾಟ ಮಾಡಲು ಮುಂದಾಗಿರುವುದು ಜನವಿರೋಧಿ ನಿರ್ಧಾರ ಎಂದು ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್ ಖಂಡಿಸಿದ್ದಾರೆ.

ರಾಜ್ಯ ಸರ್ಕಾರವು ಸುಮಾರು 3,667 ಎಕರೆ ಜಮೀನು ತೀರಾ ಕಡಿಮೆ ಬೆಲೆಗೆ ಜಿಂದಾಲ್ ಕಂಪನಿಗೆ ಮಾರಾಟ ಮಾಡಿದ್ದಾರೆ. ಆದರೆ ಅದಕ್ಕಿಂತ ಎರಡು ಪಟ್ಟು ಹಣದಿಂದ ಖರೀದಿಸಲು ರೈತರು ಸಿದ್ಧರಿದ್ದಾರೆ. ಜಿಂದಾಲ್‌ಗೆ ನೀಡುವ ಭೂಮಿ ರೈತರಿಗೆ ನೀಡಬೇಕುʼ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು .

ʼಕಳೆದ ಬಿಜೆಪಿ ನೇತ್ರತ್ವದ ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ ಭೂಮಿ ನೀಡಲು ಮುಂದಾದ ವೇಳೆ ಅಂದು ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿ ಸರ್ಕಾರದ ಮೇಲೆ ಒತ್ತಡ ಹೇರಿದ ಕಾರಣಕ್ಕೆ ಅದನ್ನು ಕೈಬಿಟ್ಟಿತ್ತು. ಈಗ ಅದೇ ಭೂಮಿಯಲ್ಲಿ ರೈತರು ಉತ್ತಮ ಬೆಳೆ ಬೆಳೆದಿದ್ದಾರೆ. ಜೋಳ, ತೆಂಗು ಸೇರಿದಂತೆ ಇತರೆ ಬೆಳೆ ಬೆಳಯುತ್ತಿದ್ದಾರೆ. ಇಂತಹ ಫಲವತ್ತಾದ ಭೂಮಿಯನ್ನು ಎಕರೆಗೆ 5 ಲಕ್ಷ ರೂ. ಕೊಟ್ಟು ಖರೀದಿಸಲು ನಾವು ಸಿದ್ಧರಿದ್ದೇವೆ, ನಮಗೆ ಕೊಡಿʼ ಎಂದು ಮನವಿ ಮಾಡಿದ್ದಾರೆ.

Advertisements

ಇಂತಹ ಫಲವತ್ತಾದ ಜಮೀನನ್ನು ರೈತರಿಗೆ ಕೊಡದೆ ಜಿಂದಾಲ್ ಕಂಪನಿಗೆ ನೀಡಲು ಸರ್ಕಾರ ಯಾವ ರೀತಿಯ ಒಳಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ, ಈ ಭೂಮಿಯನ್ನು 1,22,000 ಲಕ್ಷ ರೂ.ಗೆ ಜಿಂದಾಲ್‌ಗೆ ನೀಡಿರುವುದರಲ್ಲಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಾಣುತ್ತಿದೆʼ ಎಂದರು.

ʼರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಲು ಬಹುರಾಷ್ಟ್ರೀಯ ಕಂಪನಿಗಳಿಗೆ ರಾಜ್ಯದ ಜಮೀನು ನೀಡುತ್ತಿದ್ದೀರಿ, ಆದರೆ ಇಲ್ಲಿಯ ಭೂಮಿ, ನೀರು, ವಿದ್ಯುತ್ ಪಡೆದು ಲಾಭ ಗಳಿಸುವ ಕಂಪನಿಗಳು ಕನ್ನಡಿಗರಿಗೆ ಉದ್ಯೋಗ ನೀಡುತ್ತಿಲ್ಲ. ಆದರೆ ಸರ್ಕಾರಗಳು ಮಾತ್ರ ಇದರ ಬಗ್ಗೆ ಚಕಾರ ಎತ್ತುವುದಿಲ್ಲ. ಇಂತಹ ಜನವಿರೋಧಿ ನಿರ್ಧಾರ ಖಂಡಿಸಿ ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ʼಜಿಂದಾಲ್ ಚಲೋʼ ಚಳವಳಿ ರೂಪಿಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ; ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

ಈ ಸಂದರ್ಭದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ವೆಂಕಟರಾಮಪ್ಪ, ರಾಜ್ಯ ಸಮಿತಿ ಸದಸ್ಯ ಭಟ್ಟಿ ಎರ್ರಿಸ್ವಾಮಿ, ಯಾದಗಿರಿ ದಿಗ್ಗಿ, ವಿರೂಪಾಕ್ಷಪ್ಪ, ಜಿಲ್ಲಾ ಮುಖಂಡ ಹೇಮಂತ್ ರಾಜ್, ಬಳ್ಳಾರಿ ಜಿಲ್ಲಾಧ್ಯಕ್ಷ ಎಸ್.ನಾಗೇಶ್, ವಿಜಯನಗರ ಜಿಲ್ಲಾಧ್ಯಕ್ಷ ಸುಬಾನಿ, ಬಳ್ಳಾರಿ ನಗರ ಅಧ್ಯಕ್ಷ ಬೆಳ್ಳಿ ಕಟ್ಟೆಪ್ಪ, ಎಸ್.ಟಿ.ಘಟಕ ಜಿಲ್ಲಾಧ್ಯಕ್ಷ ಡಿ.ವೀರೇಶ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X