ಮಂಡ್ಯ | ಶಿಕ್ಷಕರ ಪ್ರೋತ್ಸಾಹ: ಕ್ರೀಡೆಯಲ್ಲಿ ಸಾಧನೆಗೈದ ಚಿಕ್ಕಮಂಡ್ಯ ಸರ್ಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳು

Date:

Advertisements

ಸರಕಾರಿ ಶಾಲೆಗಳು ದಿನಕ್ಕೊಂದರಂತೆ ಮುಚ್ಚುತ್ತಿರುವ ಹೊತ್ತಲ್ಲಿ ಚಿಕ್ಕಮಂಡ್ಯ ಶಾಲೆಯ ಮತ್ತು ಅಲ್ಲಿನ ಶಿಕ್ಷಕರ ಈ ಸಾಧನೆ ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಇತ್ತೀಚೆಗೆ ಹಳೆಬೂದನೂರು ಗ್ರಾಮದಲ್ಲಿ ನಡೆದ ಮಂಡ್ಯ ತಾಲೂಕುಮಟ್ಟದ ಕ್ರೀಡಾಕೂಟದಲ್ಲಿ ಚಿಕ್ಕಮಂಡ್ಯ ಸರಕಾರಿ ಪ್ರೌಢಶಾಲೆಯ ಹೆಣ್ಣು ಮಕ್ಕಳ ಸಾಧನೆ ಅಚ್ಚರಿ ಮೂಡಿಸಿದೆ. ಅಥ್ಲೆಟಿಕ್ಸ್‌ನ ಓಟದ ಅಷ್ಟೂ ಪ್ರಕಾರದಲ್ಲಿ ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. 100 ಮೀಟರ್ ಓಟದಿಂದ 3000 ಓಟದವರೆಗೂ ಜೊತೆಗೆ ರಿಲೆ, ನಡಿಗೆ ಹಾಗು ಖೊಖೊ ಆಟದಲ್ಲೂ ಮೊದಲ ಸ್ಥಾನ ಪಡೆದಿದ್ದಾರೆ.

ಈ ಬಗ್ಗೆ ಚಿಕ್ಕಮಂಡ್ಯ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಎನ್. ದೇವರಾಜು ಮಾತನಾಡಿ, “ನಾವು ಬಂದಾಗ ಆಟದ ಮೈದಾನ ಇರಲಿಲ್ಲ. ಗಿಡ ಗಂಟಿಗಳು ಬೆಳೆದುಕೊಂಡು ಹಳ್ಳವಾಗಿತ್ತು. ಕಬಡ್ಡಿಗೆ ಮಾತ್ರ ಮನ್ನಣೆ ಇತ್ತು. ಎಲ್ಲರ ಸಹಕಾರ ಪಡೆದು ಆಟದ ಮೈದಾನ ಅಭಿವೃದ್ಧಿ ಪಡಿಸಿದೆವು. ಓಟದ ಸ್ಪರ್ಧೆಗಳಲ್ಲಿ ಪ್ರೋತ್ಸಾಹ, ನಿರಂತರ ಶ್ರಮಕ್ಕೆ ಗೆಲುವು ಸಿಕ್ಕಿದೆ. ಇದೇ ರೀತಿ ಮುಂದುವರಿದರೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಾರೆ ಎಂಬ ನಂಬಿಕೆ ಇದೆ” ಎಂದರು.

Advertisements

ದೈಹಿಕ ಶಿಕ್ಷಣ ಶಿಕ್ಷಕ ಚಂದನ್ ಮಾತನಾಡಿ, “ನಾನು ಬಂದಾಗ ಮೈದಾನ ಸಮತಟ್ಟಾಗಿ ಇರಲಿಲ್ಲ. ತಿಪ್ಪೆ ಹಾಕಿ ಗುಂಡಿಯಾಗಿತ್ತು. ಚರಂಡಿ ನೀರು, ಮಳೆ ನೀರು ಶಾಲ ಅಂಗಳಕ್ಕೆ ನುಗ್ಗುತ್ತಿತ್ತು. ಈಗ ಟ್ರ್ಯಾಕ್ ಆಗಿದೆ. ಖೊಖೊ, ಕಬಡ್ಡಿ ಕೋರ್ಟ್ ಆಗಿದೆ. ಮೊದಲು ಪೋಷಕರ ಜೊತೆ ಮಾತನಾಡಿ ಮನವರಿಕೆ ಮಾಡಿದೆವು. ನಂತರ ಹೆಣ್ಣು ಮಕ್ಕಳಿಗೆ ಕ್ರೀಡೆಯ ಪ್ರಯೋಜನ ಬಗ್ಗೆ ತಿಳಿಸಿಕೊಟ್ಟ ಮೇಲೆ ಭಾಗವಹಿಸುವಿಕೆ ಹೆಚ್ಚಾಯ್ತು. ಈ ಸಾಲಿನಲ್ಲಿ ಇಲಾಖೆ ನಡೆಸಿದ ಅಷ್ಟೂ ಈವೆಂಟುಗಳಲ್ಲಿ ಭಾಗವಹಿಸಿ ಒಂದಲ್ಲ ಒಂದು ಬಹುಮಾನ ಪಡೆದಿದ್ದಾರೆ. ನಮ್ಮ ಇಬ್ಬರು ಹೆಣ್ಣು ಮಕ್ಕಳು ಜಂಟಿ ಚಾಂಪಿಯನ್ ಶಿಪ್ ಗಳಿಸಿದ್ದಾರೆ” ಎಂದರು.

ಮಂಡ್ಯ1 2

ಮಂಡ್ಯ ಗ್ರಾಮಾಂತರ ಪಂಚಾಯತಿ ಪಿಡಿಒ ಸುನಿಲ್ ಮಾತನಾಡಿ, “ನಮ್ಮ ವ್ಯಾಪ್ತಿಯಲ್ಲಿರುವ ಚಿಕ್ಕಮಂಡ್ಯ ಪ್ರೌಢಶಾಲೆಗೆ 2022ನೇ ಸಾಲಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿದ್ದೇವೆ. ಪಂಚಾಯಿತಿ ಅನುದಾನದಲ್ಲಿ 2% ಅನುದಾನವನ್ನು ಕ್ರೀಡಾ ಚಟುವಟಿಕೆಗಳಿಗೆ ಬಳಸಲು ಅವಕಾಶ ಇದೆ. ಚಿಕ್ಕಮಂಡ್ಯ ಶಾಲೆಯವರ ಬೇಡಿಕೆಯಂತೆ ಮೈದಾನದ ಅಭಿವೃದ್ಧಿ ಆಗಬೇಕಿದೆ‌. ಮನರೇಗಾ ಯೋಜನೆಯಡಿ ಓಟದ ಟ್ರ್ಯಾಕ್ ಹಾಗೂ ಇನ್ನಿತರ ಆಟದ ಕೋರ್ಟ್‌ಗಳನ್ನು ಶುರು ಮಾಡಿದ್ದೇವೆ. ಸದಸ್ಯರ ಸಹಕಾರದೊಂದಿಗೆ ಆದಷ್ಟು ಬೇಗ ಕೆಲಸ ಮುಗಿಸಿ ಹಸ್ತಾಂತರಿಸುತ್ತೇವೆ” ಎಂದರು.

ಈ ಶಾಲೆಯಲ್ಲಿ ಬಹುತೇಕ ಬಡವರು, ಕೂಲಿಕಾರ್ಮಿಕರ, ದಲಿತರ ಮಕ್ಕಳೇ ಹೆಚ್ಚಾಗಿದ್ದಾರೆ. ಈ ಸಾಧನೆ ಹೀಗೆ ಮುಂದುವರಿದರೆ ಮುಂದೊಂದು ದಿನ ಒಲಿಂಪಿಕ್ಸ್‌ನಲ್ಲಿ ಈ ಮಕ್ಕಳೂ ಓಡಬಹುದು. ಅನುಮಾನ ಬೇಡ ಎನ್ನುವುದು ಸಹ ಶಿಕ್ಷಕರ, ಎಸ್‌ಡಿಎಂಸಿ ಸದಸ್ಯರು ಹಾಗೂ ಊರ ಜನರ ಒಕ್ಕೊರಲ ಅನಿಸಿಕೆ.

Untitled 24
ನಗರಕೆರೆ ಜಗದೀಶ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X