ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ: ರೈತರ ಪ್ರತಿಭಟನೆಯಲ್ಲಿ ಭಾಗಿಯಾದ ಕುಸ್ತಿಪಟು ವಿನೇಶ್ ಫೋಗಟ್

Date:

Advertisements

ಕುಸ್ತಿಪಟು ವಿನೇಶ್ ಫೋಗಟ್ ಅವರು ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. “ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ” ಎಂದು ರೈತರಿಗೆ ಫೋಗಟ್ ಭರವಸೆ ನೀಡಿದ್ದಾರೆ. ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯು ಶನಿವಾರ 200ನೇ ದಿನಕ್ಕೆ ಕಾಲಿರಿಸಿದೆ. 200ನೇ ದಿನದಂದು ಫೋಗಟ್ ರೈತರ ಜೊತೆ ಸೇರಿದ್ದಾರೆ.

ದೆಹಲಿಗೆ ತೆರಳಲು ಪೊಲೀಸರು ತಡೆದ ಬಳಿಕ ಫೆಬ್ರವರಿ 13ರಿಂದ ರೈತರು ಶಂಭು ಗಡಿಯಲ್ಲಿ ಠಿಕಾಣಿ ಹೂಡಿದ್ದಾರೆ. ಪ್ರತಿಭಟನಾಕಾರರು ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಜೊತೆಗೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿನೇಶ್ ಫೋಗಟ್, “ನಿಮ್ಮ ಆಂದೋಲನ ಇಂದಿಗೆ 200 ದಿನಗಳನ್ನು ಪೂರೈಸಿದೆ. ನಿಮ್ಮ ಹಕ್ಕು, ನ್ಯಾಯ ನಿಮಗೆ ಸಿಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ. ನಾವೂ ಸಹ ಈ ದೇಶದ ಪ್ರಜೆಗಳು, ನಾವು ಪ್ರತಿ ಬಾರಿಯೂ ದನಿ ಎತ್ತಿದರೆ ಅದು ರಾಜಕೀಯವಲ್ಲ. ಸರ್ಕಾರ ಬೇಡಿಕೆಯನ್ನು ಕೇಳಬೇಕು” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ನನ್ನ ಹೋರಾಟ ಕೊನೆಗೊಂಡಿಲ್ಲ, ಈಗಷ್ಟೇ ಶುರುವಾಗಿದೆ: ವಿನೇಶ್ ಫೋಗಟ್

ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಫೋಗಟ್, “ರೈತರ ಪ್ರತಿಭಟನೆ 200 ದಿನ ಪೂರೈಸಿದೆ. ಕಳೆದ ಬಾರಿ 13 ತಿಂಗಳ ಕಾಲ ಪ್ರತಿಭಟನೆ ಮುಂದುವರಿದಿತ್ತು. ಸರ್ಕಾರ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದರೂ ಇನ್ನೂ ಈಡೇರಿಸಿಲ್ಲ ಎಂಬ ಕಾರಣಕ್ಕೆ ರೈತರು ಇಲ್ಲಿಯೇ ಕುಳಿತಿದ್ದಾರೆ. ಇದು ಬಹಳ ಬೇಸರ ತಂದಿದೆ” ಎಂದರು.

“ಅವರೂ ಕೂಡಾ ದೇಶದ ಪ್ರಜೆಗಳು, ದೇಶವನ್ನು ನಡೆಸುತ್ತಾರೆ. ಅವರು ಇಲ್ಲದೆ ನಾವು ಏನೂ ಅಲ್ಲ. ಅವರು ನಮಗೆ ಆಹಾರವನ್ನು ನೀಡದಿದ್ದರೆ, ನಾವು ವಿಶ್ವ ವೇದಿಕೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ. ನಮ್ಮ ಸ್ವಂತ ಕುಟುಂಬಕ್ಕಾಗಿ ನಾವು ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ದುಃಖವಿದೆ” ಎಂದು ವಿನೇಶ್ ಫೋಗಟ್ ಬೇಸರ ವ್ಯಕ್ತಪಡಿಸಿದರು.

“ನಾನು ರೈತ ಕುಟುಂಬದಲ್ಲಿ ಹುಟ್ಟಿದ್ದು ನನ್ನ ಅದೃಷ್ಟ. ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ನಮ್ಮ ಹಕ್ಕುಗಳಿಗಾಗಿ ನಾವು ನಿಲ್ಲಬೇಕು. ಯಾಕೆಂದರೆ ಬೇರೆ ಯಾರೂ ಕೂಡಾ ನಮ್ಮ ಪರವಾಗಿ ಮಾತನಾಡಲು ಬರಲ್ಲ. ನಿಮ್ಮ ಬೇಡಿಕೆ ಈಡೇರದೆ ನೀವು ಹಿಂಜರಿಯಬೇಡಿ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X