ಹುಬ್ಬಳ್ಳಿ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ ತಾತ್ಕಾಲಿಕ ಪರಿಹಾರ!

Date:

Advertisements

ಹುಬ್ಬಳ್ಳಿ ನಗರದ ಆರ್ ಎನ್ ಶೆಟ್ಟಿ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವ ಪರಿಣಾಮ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ, ವೃದ್ಧರಿಗೆ ಓಡಾಡಲು ಬಹಳ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಆಗಸ್ಟ್ 29ರಂದು ‘ಗುಂಡಿಗಳಿಂದ ತುಂಬಿ ಹೋದ ಆರ್ ಎನ್ ಶೆಟ್ಟಿ ರಸ್ತೆ: ಜನಪ್ರತಿನಿಧಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ’ ಎಂಬ ಶೀರ್ಷಿಕೆಯಡಿಯಲ್ಲಿ ಈ ದಿನ.ಕಾಮ್ ವಿಡಿಯೋ ವರದಿ ಮಾಡಿತ್ತು.

ಈದಿನ.ಕಾಮ್ ವರದಿಯಿಂದ ಎಚ್ಚೆತ್ತುಕೊಂಡ ಮಹಾನಗರ ಪಾಲಿಕೆ ಅಧಿಕಾರಿಗಳು, ಅಪಘಾತದ ಕೂಪಗಳಂತಿದ್ದ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿಸಿ ತಾತ್ಕಾಲಿಕವಾಗಿ ರಸ್ತೆ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ.

ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿ ಮಠಕ್ಕೆ ತಲುಪುವ ಆರ್ ಏನ್ ಶೆಟ್ಟಿ ರಸ್ತೆಯಲ್ಲಿ ಬೃಹತ್ ರಸ್ತೆ ಗುಂಡಿಗಳು ಬಿದ್ದಿದ್ದ ಪರಿಣಾಮ ಸಾರ್ವಜನಿಕರ ಸಂಚಾರಕ್ಕೆ ಬಹಳಷ್ಟು ಸಮಸ್ಯೆ ಉಂಟಾ ಮಾಡುತ್ತಿತ್ತು. ಹಲವು ಬಾರಿ ಸಂಬಂಧಪಟ್ಟ ಪಾಲಿಕೆ ಸದಸ್ಯರು, ಶಾಸಕರ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದರು.

Advertisements

ಈ ಕುರಿತು ಈದಿನ ಆಗಸ್ಟ್ 29 ರಂದು ಪ್ರತ್ಯಕ್ಷ ವರದಿ ಮಾಡಿದ್ದು, ಅಧಿಕಾರಿಗಳ ಗಮನಸೆಳೆಯುವ ಕೆಲಸ ಮಾಡಿತ್ತು. ಈ ದಿನ ವರದಿಯ ಮರುದಿನವೇ ವರದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು, ತೆರೆದುಕೊಂಡಿದ್ದ ಗುಂಡಿಗಳಿಗೆ ಮಣ್ಣು ಹಾಕಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಹೋರಾಟಗಾರ ರಾಜು ನಾಯಕವಾಡಿ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಈ ದಿನ.ಕಾಮ್‌ನ ಸುದ್ಧಿಯಿಂದ ಜನರಿಗೆ ಅನುಕೂಲ ಆಯಿತು, ನಿಮ್ಮ ವರದಿಯಿಂದ ಪಾಲಿಕೆ ಎಚ್ಚೆತ್ತುಕೊಂಡು ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಿದೆ. ಆದರೆ ಸಂಪೂರ್ಣ ಉತ್ತಮ ರಸ್ತೆ ನಿರ್ಮಿಸಲು ಶ್ರಮಿಸಬೇಕು. ಮಳೆಗಾಲ ಮುಗಿದ ಕೂಡಲೇ ರಸ್ತೆ ಕಾಮಗಾರಿ ನಡೆಸಬೇಕು” ಎಂದು ಆಗ್ರಹಿಸಿದರು.

IMG 20240805 WA0207
ಶರಣಪ್ಪ ಗೊಲ್ಲರ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Sir. In Dharwad. Malmaddi. Area. Mahishi Road. Bagalkot petrol pump. ROAD s. Are lot of pot holes. Even. Tar is not put. In. All roads of. Malmaddi. Areas. Please. Look into this. Seriously.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X