ದೇಶದ ಜನತೆಗೆ ಬೆಳ್ಳಂಬೆಳಗ್ಗೆಯೇ ಆಘಾತ: ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ

Date:

Advertisements

ದೇಶದ ಜನತೆಗೆ ಸೆಪ್ಟೆಂಬರ್‌ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭಾರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ.

ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಏರಿಕೆಯ ಬಗ್ಗೆ ಘೋಷಣೆ ಮಾಡಿದ ನಂತರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಶನಿವಾರದಿಂದ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರವನ್ನು ಸೆಪ್ಟೆಂಬರ್ 1 ರಿಂದ 39 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಚಿಲ್ಲರೆ ಬೆಲೆಯನ್ನು 1,691.50 ರೂ.ಗೆ ಜಾರಿಗೊಳಿಸಲಾಗಿದೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಆಗಸ್ಟ್ 1 ರಂದು, ತೈಲ ಕಂಪನಿಗಳು ನವದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಂತಹ ಮೆಟ್ರೋ ನಗರಗಳನ್ನು ಒಳಗೊಂಡಂತೆ ದೇಶಾದ್ಯಂತ 19 ಕೆಜಿ ಸಿಲಿಂಡರ್‌ಗೆ ರೂ 8.50 ಹೆಚ್ಚಳ ಮಾಡಿ ಘೋಷಿಸಿದ್ದವು. ಆಗಸ್ಟ್‌ನಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 8.50 ರೂಪಾಯಿ ಏರಿಕೆ ಮಾಡಲಾಗಿತ್ತು. ಇತ್ತ ಇಂದಿನಿಂದ ಚೆನ್ನೈನಲ್ಲಿ ವಾಣಿಜ್ಯ ಬಳಕೆಗಾಗಿ 19 ಕೆಜಿ ಅಡುಗೆ ಅನಿಲ ಸಿಲಿಂಡರ್ ಅನ್ನು 1,855 ರೂ.ಗೆ ಮಾರಾಟ ಮಾಡುವುದಾಗಿ ಘೋಷಿಸಿವೆ. ಅದೇ ರೀತಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಕೋಲ್ಕತ್ತಾದಲ್ಲಿ 1,756 ರೂ. ಮತ್ತು ಮುಂಬೈನಲ್ಲಿ 1,598 ರೂ.ಗೆ ನಿಗದಿಪಡಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಹರಿಯಾಣ, ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬದಲು

ಬೆಂಗಳೂರಿನಲ್ಲಿಯೂ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 38 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ 1769.50 ರೂಪಾಯಿಗೆ ಸಿಲಿಂಡರ್ ಸಿಗಲಿದೆ. ಅದೇ ಸಮಯದಲ್ಲಿ, ದೇಶೀಯ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹಾಗಾಗಿ ಗೃಹಬಳಕೆಯ ಸಿಲಿಂಡರ್ ಬೆಲೆ ರೂ.805.50 ಆಗಿ ಮುಂದುವರಿದಿದೆ.

ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು. ಯಾಕೆಂದರೆ ಗ್ಯಾಸ್ ಬೆಲೆ ಏರಿಕೆಯಾದಂತೆ ಹೋಟೆಲ್‌ಗಳು ತಿಂಡಿಗಳ ಬೆಲೆಯನ್ನೂ ಏರಿಸುತ್ತವೆ. ಹೀಗಾಗಿ ಈಗಾಗಲೇ ದಿನನಿತ್ಯದ ಬಹುತೇಕ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗಂತೂ ಈ ಬೆಲೆ ಏರಿಕೆಯು ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X