ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

Date:

Advertisements

ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕೂಡಾ ಅವಳಿನಗರ ಮಾತ್ರ ಸ್ಮಾರ್ಟ್ ಆಗುತ್ತಿಲ್ಲ. ಸ್ಮಾರ್ಟ್ ಸಿಟಿ ಹಣೆಪಟ್ಟಿ ಹೊತ್ತಿರುವ ಅವಳಿ ನಗರ ತಗ್ಗು-ಗುಂಡಿಗಳ ಆಗರವಾಗುತ್ತಿರುವದು ವಿಪರ್ಯಾಸವಾಗಿದೆ ಎಂದು ಸಮಾಜ ಸೇವಕ ರಾಜು‌ ನಾಯಕವಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, “ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅನುದಾನ ಬಿಡುಗಡೆಗೆ ಕೋರಿ ಪತ್ರ ಬರೆದಿದ್ದಾರೆ. ಈ ಹಣವಾದರೂ ಅಭಿವೃದ್ಧಿಗೆ ಪೂರಕವಾಗಿ ಖರ್ಚುವಾಗುವುದೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ” ಎಂದರು.

ಸ್ಮಾರ್ಟ್‌ ಸಿಟಿ ಹುಬ್ಬಳ್ಳಿ

“ಜನಸಾಮಾನ್ಯರ ತೆರಿಗೆ ಹಣ ಪೋಲಾಗುವುದನ್ನು ನಾವೆಲ್ಲರೂ ಖಂಡಿಸಬೇಕಿದೆ. ಏಕೆಂದರೆ ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಸ್ಮಾರ್ಟ್ ಸಿಟಿ ಸೇರಿದಂತೆ ಇತರ ಯೋಜನೆಗಳಿಂದ ನೂರಾರು ಕೋಟಿ ಹಣ ಬಂದಿದೆ. ಇದನ್ನು ಸ್ವತಃ ಜನಪ್ರತಿನಿಧಿಗಳೇ ಹೇಳಿಕೊಳ್ಳುತ್ತಾರೆ. ಹೀಗಿರುವಾಗ ನಗರ ಮಾತ್ರ ಯಾಕೆ ನಿರೀಕ್ಷೆಯ ಮಟ್ಟದಲ್ಲಿಯಾದರೂ ಅಭಿವೃದ್ಧಿಯಾಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಕ್ರಮ ಗಣಿಗಾರಿಕೆ, ಜಿಂದಾಲ್‌ಗೆ ಭೂ ಮಂಜೂರು ವಿರೋಧಿಸಿ ಸೆ.4 ರಂದು ಸಮಾವೇಶ

“ಇದೀಗ ಮಹಾಪೌರರು ಅನುದಾನ ಬಿಡುಗಡೆಗೆ ಮನವಿ ಮಾಡಿರುವುದು ಸ್ವಾಗತಾರ್ಹ‌. ಹೀಗಾಗಿ ಈಗಲಾದರೂ ಮೇಯರ್, ಉಪಮೇಯರ್, ಸರ್ವಸದಸ್ಯರು ಮತ್ತು ಅಧಿಕಾರಿಗಳು ಜನರ ತೆರಿಗೆ ಹಣವನ್ನು ಪೋಲು ಮಾಡದೇ, ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಿ ನಗರವನ್ನು ಅಭಿವೃದ್ಧಿಗೊಳಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X