ಪಂಜಾಬ್‌ | ಲುಧಿಯಾನ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ; 11 ಮಂದಿ ಸಾವು

Date:

Advertisements
  • ಪಂಜಾಬ್‌ನ ಲುಧಿಯಾನ ನಗರದಲ್ಲಿ ಮಿಥೇನ್‌ಅನಿಲ ಸೋರಿಕೆ ಶಂಕೆ
  • ಶೇರ್ಪುರ್‌ ಚೌಕ್‌ ಬಳಿಯ ಗಿಯಾಸ್‌ಪುರ ಪ್ರದೇಶದ ಕಾರ್ಖಾನೆಯಲ್ಲಿ ಘಟನೆ

ಪಂಜಾಬ್‌ನ ಲುಧಿಯಾನ ನಗರದಲ್ಲಿನ ಕಾರ್ಖಾನೆಯೊಂದರಲ್ಲಿ ಭಾನುವಾರ (ಏಪ್ರಿಲ್ 30) ಅನಿಲ ಸೋರಿಕೆ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಜಾಬ್‌ನ ಲುಧಿಯಾನ ನಗರದ ಶೇರ್ಪುರ್‌ ಚೌಕ್‌ ಬಳಿಯ ಗಿಯಾಸ್‌ಪುರ ಪ್ರದೇಶದ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಿಗ್ಗೆ 7.15ಕ್ಕೆ ಅನಿಲ ಸೋರಿಕೆಯಾಗಿದೆ. ಘಟನೆಯಲ್ಲಿ ಮೃತಪಟ್ಟವರಲ್ಲಿ ಐವರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಹೇಳಲಾಗಿದೆ.

Advertisements

ಅನಿಲ ಸೋರಿಕೆ ಬಳಿಕ ಪ್ರದೇಶದಲ್ಲಿ ಜನರ ಸಂಚಾರ ಬಂದ್‌ ಮಾಡಲಾಗಿದ್ದು, ಲುಧಿಯಾನ ನಗರದಲ್ಲಿ ನಿಗಾ ವಹಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರದೇಶಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ವೈದ್ಯರ ತಂಡ ಹಾಗೂ ಆಂಬುಲೆನ್ಸ್‌ ಸ್ಥಳದಲ್ಲಿ ಬೀಡುಬಿಟ್ಟಿವೆ ಎಂದು ಪೊಲೀಸರು ತಿಳಿಸಿದರು.

ಅನಿಲ ಸೋರಿಕೆಯಾಗಿ ಅಸ್ವಸ್ಥಗೊಂಡವರಲ್ಲಿ ಐದು ಮಂದಿ ಮಹಿಳೆಯರು, ಆರು ಪುರುಷರು ಮತ್ತು ಇಬ್ಬರು ಬಾಲಕರು ಸೇರಿದ್ದಾರೆ. “ಅನಿಲ ಸೋರಿಕೆಗೆ ಕಾರಣ ಪತ್ತೆಯಾಗಿಲ್ಲ. ಇದರ ಬಗ್ಗೆ ಎನ್‌ಡಿಆರ್‌ಎಫ್‌ ತನಿಖೆ ನಡೆಸುತ್ತದೆ” ಎಂದು ಲುಧಿಯಾನದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್‌ ಸ್ವಾತಿ ತಿವಾನಾ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಅತಿ ಹೆಚ್ಚು ಕಳ್ಳತನವಾಗುತ್ತಿರುವ ಕಾರು-ಬೈಕ್‌ ಯಾವುದು ಗೊತ್ತಾ?

“ಈವರೆಗೆ ಲುಧಿಯಾನದ ಘಟನೆಯಲ್ಲಿ 11 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮಿಥೇನ್‌ ಅನಿಲ ದುರಂತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ. ಮಾದರಿ ಸಂಗ್ರಹಿಸುತ್ತಿದ್ದು ಪರಿಶೀಲಿಸಲಾಗುತ್ತದೆ” ಎಂದು ಲುಧಿಯಾನದ ಉಪ ಆಯುಕ್ತೆ ಸುರಭಿ ಮಲಿಕ್‌ ತಿಳಿಸಿದರು.

ಮೃತರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಂತಾಪ ಸೂಚಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಅನಿಲ ಸೋರಿಕೆ ಘಟನೆಯಿಂದ ತೀವ್ರ ದುಃಖವಾಗಿದೆ. ಪೊಲೀಸರು, ಎನ್‌ಡಿಆರ್‌ಎಫ್‌ ಮತ್ತು ಸರ್ಕಾರ ಸ್ಥಳದಲ್ಲಿದೆ. ಎಲ್ಲ ರೀತಿಯ ನೆರವು ನೀಡಲಾಗುವುದು” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X