ಶಿವಮೊಗ್ಗ | ರೈತರೊಂದಿಗೆ ಅಧಿಕಾರಿಗಳ ಅಮಾನವೀಯ ವರ್ತನೆ ಸಹಿಸಲ್ಲ: ಸಚಿವ ಮಧುಬಂಗಾರಪ್ಪ

Date:

Advertisements

“ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ಎಚ್ಚರಿಸಿದರು.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಚೇರಿ ಆವರಣದಲ್ಲಿ ಆಯೋಜಿಸಿಲಾದ ಬಗರ್‌ ಹುಕುಂ ಅಕ್ರಮ-ಸಕ್ರಮ ಸಮಿತಿ, ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅರಣ್ಯ ರಕ್ಷಕರು ಹಾಗೂ ವನ ಪಾಲಕರ ಅಮಾನವೀಯ ವರ್ತನೆ ಅಕ್ಷ್ಯಮ್ಯ ಅಪರಾಧ. ಅನೇಕ ವರ್ಷದಿಂದ ಕಾನು, ಸೊಪ್ಪಿನ ಬೆಟ್ಟ, ಹುಲ್ಲುಜಾಡು, ಈ ಪ್ರದೇಶಗಳಲ್ಲಿ ಕೃಷಿ ಮಾಡಿಕೊಂಡು ಬಂದಿರುವ ರೈತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಕಾರ್ಯ ಮಾಡುತ್ತಿದ್ದಾರೆ. ಈ ರೀತಿಯ ವರ್ತನೆ ಸರಿಯಲ್ಲ” ಎಂದರು.

“ಅರಣ್ಯ ಭೂಮಿ ವಿಚಾರವಾಗಿ ನ್ಯಾಯಲಯದ ಹಂತದಲ್ಲಿ ತನಿಖೆ ನಡೆಯುತ್ತಿದೆ. ಆದ್ದರಿಂದ, ಅರಣ್ಯ ಅಧಿಕಾರಿಗಳು ಎಚ್ಚರಿಕೆಯ ಹೆಜ್ಜೆ ಇಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ರೈತರನ್ನು ಏಕಾ ಏಕಿ ಒಕ್ಕಲೆಬ್ಬಿಸುವ ಕ್ರಮದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದ್ದರಿಂದ ಅಧಿಕಾರಿಗಳು ತಾಳ್ಮೆಯ ಗುಣ ಬೆಳೆಸಿಕೊಳ್ಳಬೇಕು” ಎಂದು ತಾಕೀತು ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

“ಅರಣ್ಯ ಮತ್ತು ಕಂದಾಯ ಭೂಮಿಗೆ ಸಂಬಂಧಪಟ್ಟಂತೆ ಅನೇಕ ವರ್ಷದಿಂದ ಸಮಸ್ಯೆಗಳು ಜೀವಂತವಾಗಿವೆ. ಈ ಎಲ್ಲ ತೊಡಕುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಬಗರ್‌ ಹುಕುಂ ಸಮಿತಿಗೆ ಸಲ್ಲಿಸಿರುವ ಸಾಕಷ್ಟು ಅರ್ಜಿಗಳನ್ನು ಈ ಹಿಂದೆ ತಿರಸ್ಕರಿಸಲಾಗಿದೆ. ಇದರಿಂದ, ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಬಂದ ಕುಟುಂಬಗಳಿಗೆ ತೊಂದರೆ ಆಗಲಿದೆ. ರೈತರಿಂದ ಪುನಃ ದೂರುಗಳನ್ನು ಪಡೆದು ಕಾನೂನಿನ ಪ್ರಕಾರ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳಬೇಕು” ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಯತೀಶ್, ತಾಲ್ಲೂಕು ಇ.ಒ ಪ್ರದೀಪ್ ಕುಮಾರ್, ತಹಶೀಲ್ದಾರ್ ಮಂಜುಳಾ, ಡಿಎಫ್ಒ ಮೋಹನ್ ಕುಮಾರ್ ಡಿ, ಆಎಫ್ಒ ಶಬುಬ್ತಾ ಶೇಖ್,ಪರುಶುರಾಮ, ಜಾವೀದ್ ಅಹ್ಮದ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ ಶೇಖರ್ ಸೇರಿದಂತೆ ಬಗರ್ ಹುಕುಂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X