ತುಮಕೂರು | ಮೈಸೂರು ದಸರಾ ಮಾದರಿಯಲ್ಲಿ “ತುಮಕೂರು ದಸರಾ”

Date:

Advertisements

ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಕಳೆದ 36 ವರ್ಷಗಳಿಂದ ವಿವಿಧ ಸಂಘಟನೆಗಳನ್ನೊಳಗೊಂಡ ದಸರಾ ಸಮಿತಿಯಿಂದ ನಗರದಲ್ಲಿ ದಸರಾ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಸರಾ ಉತ್ಸವವನ್ನು ಮತ್ತಷ್ಟು ಮೆರಗುಗೊಳಿಸಲು ಜಿಲ್ಲಾಡಳಿತದ ವತಿಯಿಂದ ಈ ವರ್ಷ ಮೊದಲ ಬಾರಿಗೆ ತುಮಕೂರು ದಸರಾ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಉತ್ಸವದ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಕ್ರೀಡೆಯ ಹಿರಿಮೆಯನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ದಸರಾ ಸಾಂಸ್ಕೃತಿಕ ಹಬ್ಬವನ್ನು ಪಕ್ಷಬೇಧವಿಲ್ಲದೆ ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಸೇರಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಒಗ್ಗೂಡಿ ಆಚರಿಸಬೇಕೆಂದರಲ್ಲದೆ ದಸರಾ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಬಹುದಾದ ಧಾರ್ಮಿಕ ಆಚರಣೆ, ಜಂಬೂಸವಾರಿ, ಸಾಹಿತ್ಯ-ಕಲೆ-ಸಾಂಸ್ಕೃತಿಕ ಕಾರ್ಯಕ್ರಮ, ಆಹಾರ ಮೇಳಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Advertisements

ದಸರಾ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಜನಾಕರ್ಷಿಸುವಂತಹ ಮೆರವಣಿಗೆಯನ್ನು ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವಂತಹ ಕಲಾತಂಡಗಳು ಕಲಾ ಪ್ರದರ್ಶನ ನೀಡಬೇಕು. ವಿವಿಧ ದೇವರುಗಳ ಉತ್ಸವ ಮೂರ್ತಿಗಳು ಪಾಲ್ಗೊಂಡು ಅರ್ಥಪೂರ್ಣ ಆಚರಣೆಯಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ದಸರಾ ಉತ್ಸವದ ಮುಖ್ಯ ವೇದಿಕೆಯನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಯೋಜಿಸಲಾಗಿದ್ದು, ಸಿದ್ಧಪಡಿಸಿರುವ ದಸರಾ ಉತ್ಸವದ ರೂಪು-ರೇಷೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ತುಮಕೂರು ದಸರಾ ಯಶಸ್ವಿಗಾಗಿ ಸ್ವಾಗತ, ಆಹ್ವಾನ ಪತ್ರಿಕೆ ಮತ್ತು ವೇದಿಕೆ ಸಮಿತಿ, ಮೆರವಣಿಗೆ ಸಮಿತಿ(ಸ್ತಬ್ದಚಿತ್ರಗಳ ಮೆರವಣಿಗೆ ಒಳಗೊಂಡAತೆ), ಗ್ರಾಮೀಣ ದಸರಾ(ರೈತ ದಸರಾ) ಸಮಿತಿ, ಕ್ರೀಡಾ ದಸರಾ ಸಮಿತಿ, ಸಾಂಸ್ಕೃತಿಕ ದಸರಾ ಸಮಿತಿ, ದೀಪಾಲಂಕಾರ ಸಮಿತಿ, ಕವಿಗೋಷ್ಠಿ ದಸರಾ ಸಮಿತಿ, ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ, ಆಹಾರ ಮೇಳ ಸಮಿತಿ, ಸ್ವಚ್ಛತೆ ಮತ್ತು ವ್ಯವಸ್ಥೆ ಸಮಿತಿ ಸೇರಿದಂತೆ ಇತರೆ ಸಮಿತಿಗಳನ್ನು ರಚಿಸಲಾಗಿದ್ದು, ಅಕ್ಟೋಬರ್ 11 ಹಾಗೂ 12ರಂದು ಹಮ್ಮಿಕೊಂಡಿರುವ ಮಿನಿ ಮ್ಯಾರಥಾನ್, ಮಹಿಳಾ ದಸರಾ, ಯುವ ದಸರಾ, ಮಕ್ಕಳ ದಸರಾ, ವಸ್ತುಪ್ರದರ್ಶನ, ಕವಿಗೋಷ್ಠಿ, ತೆಪ್ಪೋತ್ಸವ, ಸ್ತಬ್ಧಚಿತ್ರ ಮೆರವಣಿಗೆ, ಪಂಜಿನ ಕವಾಯಿತು, ಕ್ರೀಡಾ ಸ್ಪರ್ಧೆ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ರೈತ ದಸರಾ, ದೀಪಾಲಂಕಾರ, ಆಹಾರ ಮೇಳ, ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 15ರಂದು ದಸರಾ ಉತ್ಸವದ ಲಾಂಛನ(ಲೋಗೋ)ವನ್ನು ಬಿಡುಗಡೆ ಮಾಡಲಾಗುವುದೆಂದು ಮಾಹಿತಿ ನೀಡಿದರು.

ತುಮಕೂರು ದಸರಾ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನೃತ್ಯರೂಪಕ, ಚಿತ್ರನಟ-ನಟಿ, ಪ್ರಸಿದ್ಧ ಗಾಯಕ, ಜಿಲ್ಲೆಯ ಹಿನ್ನೆಲೆಯುಳ್ಳ ಕಲಾವಿದರನ್ನು ಕರೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್ ಹಾಗೂ ಸುರೇಶ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಸ್ತಿದಾರರು ತಮ್ಮ ಸ್ಥಿರಾಸ್ತಿಗಳನ್ನು ಜಿಲ್ಲಾ ವ್ಯಾಪ್ತಿಯ ಯಾವುದೇ ಉಪನೋಂದಣಾ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳುವ ಬಗ್ಗೆ ಸ್ಥಾಪಿಸಿರುವ ಎನಿವೇರ್ ನೋಂದಣಿ ಸಹಾಯವಾಣಿ ಸಂಖ್ಯೆಯ 080-68265316ನ್ನೊಳಗೊಂಡ ಪೋಸ್ಟರ್ ಹಾಗೂ ರೇಷ್ಮೆ ಬೆಳೆಯನ್ನು ಬಾಧಿಸುವ ಕೀಟ ನಿರ್ವಹಣಾ ವಿಧಾನದ ಬಗ್ಗೆ ರೇಷ್ಮೆ ಇಲಾಖೆಯಿಂದ ಹೊರತಂದಿರುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.

ಸಭೆಯ ನಂತರ ಸಚಿವರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X