ಸತೀಶ್ ಜಾರಕಿಹೊಳಿ ಸಿಎಂ ಆಗುವುದಾದರೆ ನನ್ನ ಬೆಂಬಲ ಇದೆ: ಶಾಸಕ ಲಕ್ಷ್ಮಣ್‌ ಸವದಿ

Date:

Advertisements

ಬೆಳಗಾವಿ ಜಿಲ್ಲೆಯವರು ಯಾರೆ ಮುಖ್ಯಮಂತ್ರಿಯಾದರೂ ಅದಕ್ಕೆ ನನ್ನ ಬೆಂಬಲ ಇದೆ. ಅದರಲ್ಲೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗುತ್ತಾರೆ ಎಂದಾದರೆ ನನ್ನ ಬೆಂಬಲ ಸಂಪೂರ್ಣ ಇದೆ ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ತಿಳಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ನಮ್ಮ ಜಿಲ್ಲೆಯವರು ಯಾಎ ಸಿಎಂ ಆಗಲಿ‌ ಅದಕ್ಕೆ ಬೆಂಬಲ ಕೊಡುತ್ತೇವೆ” ಎಂದು ಹೇಳುವ ಮೂಲಕ ಜಿಲ್ಲೆಯ ಮತ್ತೊಬ್ಬ ನಾಯಕನಿಗೆ ಬೆಂಬಲ ಸೂಚಿಸಿದರು.

“ಎಲ್ಲರಿಗೂ ಅಧಿಕಾರ ಬೇಕಾಗಿದೆ. ಸನ್ಯಾಸಿ ಇದ್ದವರು ಯಾರೂ ರಾಜಕಾರಣಕ್ಕೆ ಬರುತ್ತಿರಲಿಲ್ಲ, ಆದರೆ ಸದ್ಯ ಸನ್ಯಾಸಿಗಳು ರಾಜಕಾರಣಕ್ಕೆ ಬರುತ್ತಿದ್ದಾರೆ. ಮತ್ರಿಯಾಗಬೇಕು ಎನ್ನುವ ಆಸೆ ಇಲ್ಲ. ಈಗಾಗಲೇ ನಾನು ಹಲವಾರು ಜವಾಬ್ದಾರಿ ಇಲಾಖೆ ನಿಭಾಯಿಸಿದ್ದೇನೆ. ರಾಜ್ಯದ ಡಿಸಿಎಂ ಆಗಿದ್ದೇನೆ, ನನಗೆನೂ ಹೊಸದಾಗಿ ಮಂತ್ರಿ ಆಗಬೇಕು ಎನ್ನುವ ಆಸೆ ಇಲ್ಲ. ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ಇವೆ” ಎಂದರು.

Advertisements

“ನನಗೆ ಯಾವುದೇ ಅನುದಾನದ ಕೊರತೆ ಇಲ್ಲ, ಒಂದೂವರೆ ವರ್ಷದಲ್ಲಿ 2 ಸಾವಿರ ಕೋಟಿ ಅಷ್ಟು ಅನುದಾನ ನೀಡಿದ್ದಾರೆ. ಕ್ಷೇತ್ರದಲ್ಲಿ ಅಗತ್ಯ ಕಾಮಗಾರಿಯನ್ನು ಕೈಗೊಂಡಿದ್ದೇನೆ. ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ” ಎಂದು ಲಕ್ಷ್ಮಣ್‌ ಸವದಿ ಹೇಳಿದರು.

ಮುಡಾ ಪ್ರಕರಣ ಕುರಿತು ಮಾತನಾಡಿ, “ಮುಡಾ ಪ್ರಕರಣ 20 ವರ್ಷಗಳ ಹಿಂದೆ ಆಗಿರುವಂತದ್ದು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಬೇಡಿಕೆ ಇಟ್ಟಿಲ್ಲ, ಯಾವುದೇ‌ ಆದೇಶ ಮಾಡಿಲ್ಲ, ತಮ್ಮ ಪತ್ನಿಗೆ ನಿವೇಶನ ಬೇಕಂತ ಎಲ್ಲಿಯೂ ಅರ್ಜಿ ಸಲಿಸಿಲ್ಲ. ಸಿಎಂ ಸಿದರಾಮಯ್ಯ ಅವರ ಪತ್ನಿಗೆ ಅವರ ಸಹೋದರ ಅರಶಿನ ಕುಂಕುಮ ವ್ಯವಸ್ಥೆಯಲ್ಲಿ ದಾನದ ರೂಪದಲ್ಲಿ ನೀಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X