ಅಪ್ರಾಪ್ತ ಬಾಲಕಿಯರ ವಿಡಿಯೋ, ಫೋಟೋ ಕ್ಲಿಕ್ಕಿಸಿದ್ದ ಶಿಕ್ಷಕ; ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

Date:

Advertisements

ಅಪ್ರಾಪ್ತ ಬಾಲಕಿಯರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ ಆರೋಪದ ಮೇಲೆ ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ವಿರುದ್ಧ ಪೋಕ್ಸೋ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದ್ದು, ಪ್ರಕರಣವನ್ನು ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದೆ.

ಶಿಕ್ಷಕ ಮುನಿಯಪ್ಪ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರು ಬಟ್ಟೆ ಬದಲಿಸುವಾಗ ಅವರ ವಿಡಿಯೋ ಮತ್ತು ಫೋಟೋ ಕ್ಲಿಕ್ಕಿಸಿದ್ದ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 12 ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಆರೋಪಿ ಮುನಿಯಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆತನ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ವರದಿ ಓದಿದ್ದೀರಾ?: ಮಹಿಳೆಯರ ಮೇಲಿನ ನಿಲ್ಲದ ಶೋಷಣೆ; ಶಿಕ್ಷಣ ಒಂದೇ ಪರಿಹಾರ

Advertisements

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ”ಆಘಾತಕಾರಿ ಸಂಗತಿಯೆಂದರೆ ಆರೋಪಿಯ ಬಳಿ ವಿವಿಧ ಬ್ರಾಂಡ್‌ಗಳ ಐದು ಮೊಬೈಲ್ ಫೋನ್‌ಗಳಿವೆ. ಎಲ್ಲ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಪ್ರತಿ ಮೊಬೈಲ್ ಫೋನ್‌ನಲ್ಲಿ ಸುಮಾರು 1,000 ಚಿತ್ರಗಳನ್ನು ಮತ್ತು ನೂರಾರು ವೀಡಿಯೊಗಳಿವೆ. ಶಿಕ್ಷಕನಾಗಿರುವ ಆರೋಪಿಯ ಬಳಿ ಐದು ಮೊಬೈಲ್‌ಗಳು ಏಕೆ ಇವೆ? ಅವುಗಳಲ್ಲಿನ ವಿಡಿಯೋಗಳು ಮತ್ತು ಚಿತ್ರಗಳು ಯಾವುವು ಎಂಬುದು ತನಿಖೆಯ ವಿಷಯವಾಗಿದೆ. ವಿಡಿಯೋ ಮತ್ತು ಚಿತ್ರಗಳ ಮಾಹಿತಿಯು ಸಂಪೂರ್ಣ ತನಿಖೆಯಿಂದ ಮಾತ್ರವೇ ಹೊರಬರಲು ಸಾಧ್ಯ” ಎಂದು ಹೇಳಿದೆ.

“ದೂರು, ತನಿಖೆಯ ವೇಳೆ ದಾಖಲಾದ ಆರೋಪಿಯ ಹೇಳಿಕೆಗಳು ಮತ್ತು ಎಫ್‌ಎಸ್‌ಎಲ್ ವರದಿಗಳನ್ನು ಗಮನಿಸಿದರೆ, ಆತನ ಕೃತ್ಯವು ಭಯಾನಕವಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X